ದೊಡ್ಡಬೆಳವಂಗಲದಲ್ಲಿ ಫೆ.17ರಂದು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನ ಹಾಗೂ ಒಬ್ಬ ಬಾಲಕ ಸೇರಿದಂತೆ ಮೂರು ಜನರನ್ನು ಬಂಧಿಸಿ ನಗರದ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಒಬ್ಬಾತ ಅಪ್ರಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬೆಳವಂಗಲದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಫೆ.17 ರಂದು ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಅಮಾಯಕ ಯುವಕರಿಗೆ ಹಾಡಹಗಲೇ ಚಾಕು ಇರಿದು ಹತ್ಯೆ ಮಾಡಲಾಗಿತ್ತು.
ಪ್ರಕರಣದಲ್ಲಿ ಭಾಗಿಯಾದ್ದ ಪ್ರಮುಖ ಆರೋಪಿಗಳಿಬ್ಬರನ್ನು ಫೆ.19ರಂದು ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿತ್ತು. ಫೆ.22ರಂದು ಒಬ್ಬ ಆರೋಪಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ.
ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನಾ ಹಾಗೂ ಒಬ್ಬ ಬಾಲಕ ಸೇರಿ ಮೂರು ಜನರನ್ನು ಫೆ.25ರಂದು ಬಂಧಿಸಿ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟಾರೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…