ದೊಡ್ಡಬೆಳವಂಗಲದಲ್ಲಿ ಫೆ.17ರಂದು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನ ಹಾಗೂ ಒಬ್ಬ ಬಾಲಕ ಸೇರಿದಂತೆ ಮೂರು ಜನರನ್ನು ಬಂಧಿಸಿ ನಗರದ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಒಬ್ಬಾತ ಅಪ್ರಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬೆಳವಂಗಲದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಫೆ.17 ರಂದು ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಅಮಾಯಕ ಯುವಕರಿಗೆ ಹಾಡಹಗಲೇ ಚಾಕು ಇರಿದು ಹತ್ಯೆ ಮಾಡಲಾಗಿತ್ತು.
ಪ್ರಕರಣದಲ್ಲಿ ಭಾಗಿಯಾದ್ದ ಪ್ರಮುಖ ಆರೋಪಿಗಳಿಬ್ಬರನ್ನು ಫೆ.19ರಂದು ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿತ್ತು. ಫೆ.22ರಂದು ಒಬ್ಬ ಆರೋಪಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ.
ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನಾ ಹಾಗೂ ಒಬ್ಬ ಬಾಲಕ ಸೇರಿ ಮೂರು ಜನರನ್ನು ಫೆ.25ರಂದು ಬಂಧಿಸಿ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟಾರೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…