ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ; ಒಬ್ಬ ಅಪ್ರಾಪ್ತ ಸೇರಿ ಮೂರು ಮಂದಿ ಆರೋಪಿಗಳ ಬಂಧನ; ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿಕೆ

ದೊಡ್ಡಬೆಳವಂಗಲದಲ್ಲಿ ಫೆ.17ರಂದು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನ ಹಾಗೂ ಒಬ್ಬ ಬಾಲಕ ಸೇರಿದಂತೆ ಮೂರು ಜನರನ್ನು ಬಂಧಿಸಿ ನಗರದ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಒಬ್ಬಾತ ಅಪ್ರಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೊಡ್ಡಬೆಳವಂಗಲದ ಜೋಡಿ ಕೊಲೆ ಪ್ರಕರಣಕ್ಕೆ‌ ಸಂಬಂಧಿಸಿ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಫೆ.17 ರಂದು ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಅಮಾಯಕ‌ ಯುವಕರಿಗೆ ಹಾಡಹಗಲೇ ಚಾಕು ಇರಿದು ಹತ್ಯೆ ಮಾಡಲಾಗಿತ್ತು.

ಪ್ರಕರಣದಲ್ಲಿ ಭಾಗಿಯಾದ್ದ ಪ್ರಮುಖ ಆರೋಪಿಗಳಿಬ್ಬರನ್ನು ಫೆ.19ರಂದು ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿತ್ತು. ಫೆ.22ರಂದು ಒಬ್ಬ ಆರೋಪಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ.

ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನಾ ಹಾಗೂ ಒಬ್ಬ ಬಾಲಕ ಸೇರಿ ಮೂರು ಜನರನ್ನು ಫೆ.25ರಂದು ಬಂಧಿಸಿ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ.

ಒಟ್ಟಾರೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಬಂಧಿತರ ಪೈಕಿ ಒಬ್ಬಾತ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

11 minutes ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

20 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago