ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ; ಒಬ್ಬ ಅಪ್ರಾಪ್ತ ಸೇರಿ ಮೂರು ಮಂದಿ ಆರೋಪಿಗಳ ಬಂಧನ; ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿಕೆ

ದೊಡ್ಡಬೆಳವಂಗಲದಲ್ಲಿ ಫೆ.17ರಂದು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನ ಹಾಗೂ ಒಬ್ಬ ಬಾಲಕ ಸೇರಿದಂತೆ ಮೂರು ಜನರನ್ನು ಬಂಧಿಸಿ ನಗರದ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಒಬ್ಬಾತ ಅಪ್ರಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೊಡ್ಡಬೆಳವಂಗಲದ ಜೋಡಿ ಕೊಲೆ ಪ್ರಕರಣಕ್ಕೆ‌ ಸಂಬಂಧಿಸಿ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಫೆ.17 ರಂದು ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಅಮಾಯಕ‌ ಯುವಕರಿಗೆ ಹಾಡಹಗಲೇ ಚಾಕು ಇರಿದು ಹತ್ಯೆ ಮಾಡಲಾಗಿತ್ತು.

ಪ್ರಕರಣದಲ್ಲಿ ಭಾಗಿಯಾದ್ದ ಪ್ರಮುಖ ಆರೋಪಿಗಳಿಬ್ಬರನ್ನು ಫೆ.19ರಂದು ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿತ್ತು. ಫೆ.22ರಂದು ಒಬ್ಬ ಆರೋಪಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ.

ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನಾ ಹಾಗೂ ಒಬ್ಬ ಬಾಲಕ ಸೇರಿ ಮೂರು ಜನರನ್ನು ಫೆ.25ರಂದು ಬಂಧಿಸಿ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ.

ಒಟ್ಟಾರೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಬಂಧಿತರ ಪೈಕಿ ಒಬ್ಬಾತ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

8 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

12 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

13 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

15 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

15 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

19 hours ago