ಇಬ್ಬರು ಯುವಕರ ಹತ್ಯೆ ಪ್ರಕರಣ; ಚಾಕು ಇರಿತ ಆರೋಪಿಗಳ ಬಂಧನ

ದೊಡ್ಡಬೆಳವಂಗಲ ಚಾಕು ಇರಿತ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ವಿನಯ್ ಹಾಗೂ ತ್ರಿಮೂರ್ತಿ ಎಂಬುವವರ ಮೇಲೆ ಗುಂಡುಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಡಿ.ಕ್ರಾಸ್ ಸಮೀಪದ ಪ್ಲೈ ಓವರ್ ನ ರೈಲ್ವೆ ಗೇಟ್ ಬಳಿ ಆರೋಪಿಗಳು ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸುವ ಸಲುವಾಗಿ ಸಿಬ್ಬಂದಿಗಳೊಂದಿಗೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಹರೀಶ್ ಕುಮಾರ್ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಹರೀಶ್ ತೆರಳಿದ್ದರು.

ಆರೋಪಿಗಳು ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸ್ ಸಿಬ್ಬಂದಿ ಕರಾ‌ರ್ ಹುಸೇನ್, ಸುನೀಲ್ ಬಾಸಗಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಆರೋಪಿಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ.

ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಶುಕ್ರವಾರ ಭರತ್ ಕುಮಾರ್ (23), ಪ್ರತೀಕ್ (17) ಎಂಬ ಯುವಕರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಗಳಾಗಿರುವ ಐದು ಜನರ ಪೈಕಿ ಅನಿಲ್ , ಕೋರಿ, ದೀಪು ಸೇರಿದಂತೆ ಇತರರು ಇನ್ನು ತಲೆಮರೆಸಿಕೊಂಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಅಮಾಯಕ ಯುವಕರ ಹತ್ಯೆ ನಡೆದ ಸ್ಥಳಕ್ಕೆ ಫೆ.18ರಂದು ಸಚಿವ ಎಂಟಿಬಿ ನಾಗರಾಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮೃತ ಯುವಕರ ಕುಟುಂಬಗಳಿಗೆ ಸಾಂತ್ವನ ಹೇಳಿ, ಆರೋಪಿಗಳನ್ನು 24 ಗಂಟೆಗಳ ಒಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಅದರಂತೆ ಇಂದು ಬಂಧಿಸಲಾಯಿತು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

5 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

16 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago