ಇಬ್ಬರು ಯುವಕರ ಹತ್ಯೆ ಪ್ರಕರಣ; ಚಾಕು ಇರಿತ ಆರೋಪಿಗಳ ಬಂಧನ

ದೊಡ್ಡಬೆಳವಂಗಲ ಚಾಕು ಇರಿತ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ವಿನಯ್ ಹಾಗೂ ತ್ರಿಮೂರ್ತಿ ಎಂಬುವವರ ಮೇಲೆ ಗುಂಡುಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಡಿ.ಕ್ರಾಸ್ ಸಮೀಪದ ಪ್ಲೈ ಓವರ್ ನ ರೈಲ್ವೆ ಗೇಟ್ ಬಳಿ ಆರೋಪಿಗಳು ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸುವ ಸಲುವಾಗಿ ಸಿಬ್ಬಂದಿಗಳೊಂದಿಗೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಹರೀಶ್ ಕುಮಾರ್ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಹರೀಶ್ ತೆರಳಿದ್ದರು.

ಆರೋಪಿಗಳು ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸ್ ಸಿಬ್ಬಂದಿ ಕರಾ‌ರ್ ಹುಸೇನ್, ಸುನೀಲ್ ಬಾಸಗಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಆರೋಪಿಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ.

ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಶುಕ್ರವಾರ ಭರತ್ ಕುಮಾರ್ (23), ಪ್ರತೀಕ್ (17) ಎಂಬ ಯುವಕರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಗಳಾಗಿರುವ ಐದು ಜನರ ಪೈಕಿ ಅನಿಲ್ , ಕೋರಿ, ದೀಪು ಸೇರಿದಂತೆ ಇತರರು ಇನ್ನು ತಲೆಮರೆಸಿಕೊಂಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಅಮಾಯಕ ಯುವಕರ ಹತ್ಯೆ ನಡೆದ ಸ್ಥಳಕ್ಕೆ ಫೆ.18ರಂದು ಸಚಿವ ಎಂಟಿಬಿ ನಾಗರಾಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮೃತ ಯುವಕರ ಕುಟುಂಬಗಳಿಗೆ ಸಾಂತ್ವನ ಹೇಳಿ, ಆರೋಪಿಗಳನ್ನು 24 ಗಂಟೆಗಳ ಒಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಅದರಂತೆ ಇಂದು ಬಂಧಿಸಲಾಯಿತು.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

11 minutes ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

3 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

4 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

7 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

7 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

8 hours ago