ದೊಡ್ಡಬೆಳವಂಗಲ ಚಾಕು ಇರಿತ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ವಿನಯ್ ಹಾಗೂ ತ್ರಿಮೂರ್ತಿ ಎಂಬುವವರ ಮೇಲೆ ಗುಂಡುಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಗರದ ಡಿ.ಕ್ರಾಸ್ ಸಮೀಪದ ಪ್ಲೈ ಓವರ್ ನ ರೈಲ್ವೆ ಗೇಟ್ ಬಳಿ ಆರೋಪಿಗಳು ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸುವ ಸಲುವಾಗಿ ಸಿಬ್ಬಂದಿಗಳೊಂದಿಗೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಹರೀಶ್ ಕುಮಾರ್ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಹರೀಶ್ ತೆರಳಿದ್ದರು.
ಆರೋಪಿಗಳು ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸ್ ಸಿಬ್ಬಂದಿ ಕರಾರ್ ಹುಸೇನ್, ಸುನೀಲ್ ಬಾಸಗಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಆರೋಪಿಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ.
ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಶುಕ್ರವಾರ ಭರತ್ ಕುಮಾರ್ (23), ಪ್ರತೀಕ್ (17) ಎಂಬ ಯುವಕರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.
ಈ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಗಳಾಗಿರುವ ಐದು ಜನರ ಪೈಕಿ ಅನಿಲ್ , ಕೋರಿ, ದೀಪು ಸೇರಿದಂತೆ ಇತರರು ಇನ್ನು ತಲೆಮರೆಸಿಕೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಅಮಾಯಕ ಯುವಕರ ಹತ್ಯೆ ನಡೆದ ಸ್ಥಳಕ್ಕೆ ಫೆ.18ರಂದು ಸಚಿವ ಎಂಟಿಬಿ ನಾಗರಾಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮೃತ ಯುವಕರ ಕುಟುಂಬಗಳಿಗೆ ಸಾಂತ್ವನ ಹೇಳಿ, ಆರೋಪಿಗಳನ್ನು 24 ಗಂಟೆಗಳ ಒಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಅದರಂತೆ ಇಂದು ಬಂಧಿಸಲಾಯಿತು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…