ದೊಡ್ಡಬೆಳವಂಗಲ ಚಾಕು ಇರಿತ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ವಿನಯ್ ಹಾಗೂ ತ್ರಿಮೂರ್ತಿ ಎಂಬುವವರ ಮೇಲೆ ಗುಂಡುಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಗರದ ಡಿ.ಕ್ರಾಸ್ ಸಮೀಪದ ಪ್ಲೈ ಓವರ್ ನ ರೈಲ್ವೆ ಗೇಟ್ ಬಳಿ ಆರೋಪಿಗಳು ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸುವ ಸಲುವಾಗಿ ಸಿಬ್ಬಂದಿಗಳೊಂದಿಗೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಹರೀಶ್ ಕುಮಾರ್ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಹರೀಶ್ ತೆರಳಿದ್ದರು.
ಆರೋಪಿಗಳು ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸ್ ಸಿಬ್ಬಂದಿ ಕರಾರ್ ಹುಸೇನ್, ಸುನೀಲ್ ಬಾಸಗಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಆರೋಪಿಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ.
ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಶುಕ್ರವಾರ ಭರತ್ ಕುಮಾರ್ (23), ಪ್ರತೀಕ್ (17) ಎಂಬ ಯುವಕರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.
ಈ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಗಳಾಗಿರುವ ಐದು ಜನರ ಪೈಕಿ ಅನಿಲ್ , ಕೋರಿ, ದೀಪು ಸೇರಿದಂತೆ ಇತರರು ಇನ್ನು ತಲೆಮರೆಸಿಕೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಅಮಾಯಕ ಯುವಕರ ಹತ್ಯೆ ನಡೆದ ಸ್ಥಳಕ್ಕೆ ಫೆ.18ರಂದು ಸಚಿವ ಎಂಟಿಬಿ ನಾಗರಾಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮೃತ ಯುವಕರ ಕುಟುಂಬಗಳಿಗೆ ಸಾಂತ್ವನ ಹೇಳಿ, ಆರೋಪಿಗಳನ್ನು 24 ಗಂಟೆಗಳ ಒಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಅದರಂತೆ ಇಂದು ಬಂಧಿಸಲಾಯಿತು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…