ಅವರಿಬ್ಬರು ಸ್ನೇಹಿತರು. ನಿನ್ನೆ ರಾತ್ರಿ ಇಬ್ಬರು ಒಟ್ಟಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಶೆ ಏರಿದ ಮೇಲೆ ಯಾವುದೋ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಒಬ್ಬನ ಜೀವ ಹೋಗಿದೆ.
ಈ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆನಂದ್ ಹಾಗೂ ರಂಗನಾಥ್ ಇಬ್ಬರು ಸ್ನೇಹಿತರು ಎಂದು ತಿಳಿದುಬಂದಿದೆ. ಆನಂದ್ ಎಂಬಾತ ರಂಗನಾಥ್ ತಲೆಗೆ ಕಲ್ಲಿನಿಂದ ಹೊಡೆದು, ತಲೆ ಜಜ್ಜಿ ಕೊಲೆಗೈದಿದ್ದಾನೆ ಎಂದು ಮಾಹಿತಿ ಒದಗಿಬಂದಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಮೂಲದ ರಂಗನಾಥ್ ಕೊಲೆಯಾದ ದುರ್ದೈವಿ. ಆನಂದ್ ಕೊಲೆ ಮಾಡಿದ ಆರೋಪಿ. ಕೊಲೆ ಮಾಡಿ ಆರೋಪಿ ಆನಂದ್ ಎಸ್ಕೇಪ್ ಆಗಿದ್ದಾನೆ.
ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಆನಂದ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…