ಇಬ್ಬರು ಹೆಚ್ಚುವರಿ ವಿಶೇಷ ಎಸಿಗಳಿಗೆ 1,147 ಹಳೇಯ ಕಂದಾಯ ಪ್ರಕರಣ ವಹಿಸಲಾಗಿತ್ತು: ಇವುಗಳ ಪೈಕಿ ಇತ್ಯರ್ಥವಾಗಿರುವುದು ಕೇವಲ 45 ಪ್ರಕರಣ ಮಾತ್ರ: ಅಧಿಕಾರಿಗಳು ರೈತರ ಪಾಲಿಗೆ ಇದ್ದೂ ಇಲ್ಲದಂತಾಗಿದೆ: ರೈತರ ಆಕ್ರೋಶ

ದೊಡ್ಡಬಳ್ಳಾಪುರ: ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ಬಾಕಿ ಇರುವ ಹಳೇಯ ಕಂದಾಯ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಿದ್ದರು ಸಹ ಯಾವುದೇ ಪ್ರಗತಿ ಕಾಣದೆ ಹೆಚ್ಚು ಅಧಿಕಾರಿಗಳು ಇದ್ದೂ ಸಹ ರೈತರ ಪಾಲಿಗೆ ಇಲ್ಲದಂತಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಇತರೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆರು ತಿಂಗಳ ಒಳಗೆ ಸಾಧ್ಯವಾದಷ್ಟು ಹಳೇಯ ಕಂದಾಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವಂತೆ ಸೂಚಲಾಗಿದೆ.

ರೈತರು ವಿನಾಕರಣ ಕಚೇರಿಗಳಿಗೆ ಅಲೆದಾಡುವುದ್ನು ತಪ್ಪಿಸಲು ಕಂದಾಯ ಸಚಿವರು ಹಲವಾರು ಸುಧಾರಣೆಗಳನ್ನು ಜಾರಿಗೆ ತರುತ್ತಲೇ ಇದ್ದಾರೆ. ಆದರೆ, ವಾಸ್ತವದಲ್ಲಿ ಮಾತ್ರ ಜಾರಿಯಾಗುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ.

ದೊಡ್ಡಬಳ್ಳಾಪುರದಲ್ಲಿ ಇಬ್ಬರು ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳಿಗೆ 1,147 ಹಳೇಯ ಕಂದಾಯ ಪ್ರಕರಣಗಳನ್ನು ವಹಿಸಲಾಗಿತ್ತು. ಇವುಗಳ ಪೈಕಿ ಇತ್ಯರ್ಥವಾಗಿರುವುದು ಕೇವಲ 45 ಪ್ರಕರಣಗಳು ಮಾತ್ರ.

ಇದೇ ಸಮಯದಲ್ಲಿ ರಾಜ್ಯದ ಇತರೆ ಜಿಲ್ಲೆಗಳಾದ ತುಮಕೂರು ವಿಶೇಷ ಉಪವಿಭಾಗಾಧಿಕಾರಿಗಳಲ್ಲಿ 2,199 ಪ್ರಕರಣಗಳ ಪೈಕಿ 435 ಇತ್ಯರ್ಥವಾಗಿವೆ. ಚಿಕ್ಕಬಳ್ಳಾಪುರ ಉಪವಿಭಾಗದಲ್ಲಿ 373 ಪ್ರಕರಣಗಳ ಪೈಕಿ 108 ಇತ್ಯರ್ಥವಾಗಿವೆ.

ಇದೇ ರೀತಿ ಇತರೆ ಜಿಲ್ಲೆಯ ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳು ಕಾಲ ಮಿತಿಯಲ್ಲಿ ಹಳೇಯ ಕಂದಾಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುತ್ತಿರುವುದು ‘ಕಂದಾಯ ನ್ಯಾಯಾಲಯ ಪ್ರಕರಣ ಮಾನಿಟರಿಂಗ್ ವ್ಯವಸ್ಥೆ’ (ಆರ್.ಸಿ. ಸಿ.ಎಂ.ಸಿ) ಯಲ್ಲಿ ನೋಡಬಹುದಾಗಿದೆ.

‘ನಗರದಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಬಾಕಿ ಇರುವ ಹೆಚ್ಚುವರಿ ಪ್ರಕರಣಗಳ ಇತ್ಯರ್ಥಕ್ಕೆ ನೇಮಕ ಮಾಡಲಾಗಿರುವ ಇಬ್ಬರು ವಿಶೇಷ ಉಪವಿಭಾಗಾಧಿಕಾರಿಗಳು ಕುಳಿತು ಕೊಳ್ಳಲು ಪ್ರತ್ಯೇಕ ಛೇಂಬರ್,ಪ್ರಕರಣಗಳ ವಿಚಾರಣೆ ನಡೆಸಲು ನ್ಯಾಯಾಲಯ ಸಭಾಂಗಣ, ಪ್ರಕರಣಗಳ ಉಸ್ತುವಾರಿಗೆ ಅಗತ್ಯ ಹೆಚ್ಚುವರಿ ವಿಷಯ ನಿರ್ವಾಹಕರೆ ಇಲ್ಲದಾಗಿದೆ.

ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ವಿಶೇಷ ಉಪವಿಭಾಗಾಧಿಕಾರಿಗಳನ್ನು ಮಾತ್ರ ನೇಮಕ ಮಾಡಿದರೆ ಹೇಗೆ ಎಂದು ಪ್ರಾಂತ ರೈತ ಸಂಘಗದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಎಚ್.ರಾಮಕೃಷ್ಣ ಪ್ರಶ್ನಿಸಿದ್ದಾರೆ.

ಮುಂದಿನ ವಾರದಲ್ಲಿ ಮಂಜೂರಿ ಭೂಮಿಯ ಪೋಡಿ ಆಂದೋಲನಕ್ಕೆ ಚಾಲನೆ ನೀಡುವ ಸಲುವಾಗಿ ದೇವನಹಳ್ಳಿ ತಾಲ್ಲೂಕಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ವಿಶೇಷ ಉಪವಿಭಾಗಾಧಿಕಾರಿಗಳ ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ಸಚಿವರ ಗಮನಕ್ಕೆ ತರಲಾಗುವುದು. ಅಲ್ಲದೆ ಇತ್ತೀಚಗಷ್ಟೇ ಕಂದಾಯ ಸಚಿವರು ಇಲ್ಲಿನ ತಾಲ್ಲೂಕು ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಗೆ ದಿಢೀರ್ ಭೇಟಿ ನೀಡಿದ್ದ ಸಮಯದಲ್ಲಿ ಇದ್ದ ಅವ್ಯವಸ್ತೆಯೇ ಈಗಲೂ ಮುಂದುವರಿದೇ ಇದೆ, ವಿನಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ ಎಂದು ದೂರಿದ್ದಾರೆ.

ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳು ಕಂದಾಯ ಪ್ರಕರಣಗಳ ಜವಾಬ್ದಾರಿ ವಹಿಸಿಕೊಂಡಿರುವುದೇ ಇನ್ನೂ 3 ತಿಂಗಳ ಹಿಂದೆ. ಪ್ರಕರಣ ಅರ್ಥ ಮಾಡಿಕೊಂಡು, ಅದಕ್ಕೆ ನ್ಯಾಯ ಒದಗಿಸಲು ಕನಿಷ್ಠ 2 ತಿಂಗಳ ಕಾಲವಕಾಶ ಹೊಸ ಅಧಿಕಾರಿಗಳಿಗೆ ನೀಡಬೇಕು. ಆ ನಂತರವಷ್ಟೇ ತೀರ್ಪು ನೀಡಲು ಸಾಧ್ಯವಾಗಲಿದೆ. ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಹೇಳಿದ್ದಾರೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

19 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

24 hours ago