ದೊಡ್ಡಬಳ್ಳಾಪುರ: ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ಬಾಕಿ ಇರುವ ಹಳೇಯ ಕಂದಾಯ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಿದ್ದರು ಸಹ ಯಾವುದೇ ಪ್ರಗತಿ ಕಾಣದೆ ಹೆಚ್ಚು ಅಧಿಕಾರಿಗಳು ಇದ್ದೂ ಸಹ ರೈತರ ಪಾಲಿಗೆ ಇಲ್ಲದಂತಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಇತರೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆರು ತಿಂಗಳ ಒಳಗೆ ಸಾಧ್ಯವಾದಷ್ಟು ಹಳೇಯ ಕಂದಾಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವಂತೆ ಸೂಚಲಾಗಿದೆ.
ರೈತರು ವಿನಾಕರಣ ಕಚೇರಿಗಳಿಗೆ ಅಲೆದಾಡುವುದ್ನು ತಪ್ಪಿಸಲು ಕಂದಾಯ ಸಚಿವರು ಹಲವಾರು ಸುಧಾರಣೆಗಳನ್ನು ಜಾರಿಗೆ ತರುತ್ತಲೇ ಇದ್ದಾರೆ. ಆದರೆ, ವಾಸ್ತವದಲ್ಲಿ ಮಾತ್ರ ಜಾರಿಯಾಗುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ.
ದೊಡ್ಡಬಳ್ಳಾಪುರದಲ್ಲಿ ಇಬ್ಬರು ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳಿಗೆ 1,147 ಹಳೇಯ ಕಂದಾಯ ಪ್ರಕರಣಗಳನ್ನು ವಹಿಸಲಾಗಿತ್ತು. ಇವುಗಳ ಪೈಕಿ ಇತ್ಯರ್ಥವಾಗಿರುವುದು ಕೇವಲ 45 ಪ್ರಕರಣಗಳು ಮಾತ್ರ.
ಇದೇ ಸಮಯದಲ್ಲಿ ರಾಜ್ಯದ ಇತರೆ ಜಿಲ್ಲೆಗಳಾದ ತುಮಕೂರು ವಿಶೇಷ ಉಪವಿಭಾಗಾಧಿಕಾರಿಗಳಲ್ಲಿ 2,199 ಪ್ರಕರಣಗಳ ಪೈಕಿ 435 ಇತ್ಯರ್ಥವಾಗಿವೆ. ಚಿಕ್ಕಬಳ್ಳಾಪುರ ಉಪವಿಭಾಗದಲ್ಲಿ 373 ಪ್ರಕರಣಗಳ ಪೈಕಿ 108 ಇತ್ಯರ್ಥವಾಗಿವೆ.
ಇದೇ ರೀತಿ ಇತರೆ ಜಿಲ್ಲೆಯ ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳು ಕಾಲ ಮಿತಿಯಲ್ಲಿ ಹಳೇಯ ಕಂದಾಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುತ್ತಿರುವುದು ‘ಕಂದಾಯ ನ್ಯಾಯಾಲಯ ಪ್ರಕರಣ ಮಾನಿಟರಿಂಗ್ ವ್ಯವಸ್ಥೆ’ (ಆರ್.ಸಿ. ಸಿ.ಎಂ.ಸಿ) ಯಲ್ಲಿ ನೋಡಬಹುದಾಗಿದೆ.
‘ನಗರದಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಬಾಕಿ ಇರುವ ಹೆಚ್ಚುವರಿ ಪ್ರಕರಣಗಳ ಇತ್ಯರ್ಥಕ್ಕೆ ನೇಮಕ ಮಾಡಲಾಗಿರುವ ಇಬ್ಬರು ವಿಶೇಷ ಉಪವಿಭಾಗಾಧಿಕಾರಿಗಳು ಕುಳಿತು ಕೊಳ್ಳಲು ಪ್ರತ್ಯೇಕ ಛೇಂಬರ್,ಪ್ರಕರಣಗಳ ವಿಚಾರಣೆ ನಡೆಸಲು ನ್ಯಾಯಾಲಯ ಸಭಾಂಗಣ, ಪ್ರಕರಣಗಳ ಉಸ್ತುವಾರಿಗೆ ಅಗತ್ಯ ಹೆಚ್ಚುವರಿ ವಿಷಯ ನಿರ್ವಾಹಕರೆ ಇಲ್ಲದಾಗಿದೆ.
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ವಿಶೇಷ ಉಪವಿಭಾಗಾಧಿಕಾರಿಗಳನ್ನು ಮಾತ್ರ ನೇಮಕ ಮಾಡಿದರೆ ಹೇಗೆ ಎಂದು ಪ್ರಾಂತ ರೈತ ಸಂಘಗದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಎಚ್.ರಾಮಕೃಷ್ಣ ಪ್ರಶ್ನಿಸಿದ್ದಾರೆ.
ಮುಂದಿನ ವಾರದಲ್ಲಿ ಮಂಜೂರಿ ಭೂಮಿಯ ಪೋಡಿ ಆಂದೋಲನಕ್ಕೆ ಚಾಲನೆ ನೀಡುವ ಸಲುವಾಗಿ ದೇವನಹಳ್ಳಿ ತಾಲ್ಲೂಕಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ವಿಶೇಷ ಉಪವಿಭಾಗಾಧಿಕಾರಿಗಳ ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ಸಚಿವರ ಗಮನಕ್ಕೆ ತರಲಾಗುವುದು. ಅಲ್ಲದೆ ಇತ್ತೀಚಗಷ್ಟೇ ಕಂದಾಯ ಸಚಿವರು ಇಲ್ಲಿನ ತಾಲ್ಲೂಕು ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಗೆ ದಿಢೀರ್ ಭೇಟಿ ನೀಡಿದ್ದ ಸಮಯದಲ್ಲಿ ಇದ್ದ ಅವ್ಯವಸ್ತೆಯೇ ಈಗಲೂ ಮುಂದುವರಿದೇ ಇದೆ, ವಿನಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ ಎಂದು ದೂರಿದ್ದಾರೆ.
ಹೆಚ್ಚುವರಿ ವಿಶೇಷ ಉಪವಿಭಾಗಾಧಿಕಾರಿಗಳು ಕಂದಾಯ ಪ್ರಕರಣಗಳ ಜವಾಬ್ದಾರಿ ವಹಿಸಿಕೊಂಡಿರುವುದೇ ಇನ್ನೂ 3 ತಿಂಗಳ ಹಿಂದೆ. ಪ್ರಕರಣ ಅರ್ಥ ಮಾಡಿಕೊಂಡು, ಅದಕ್ಕೆ ನ್ಯಾಯ ಒದಗಿಸಲು ಕನಿಷ್ಠ 2 ತಿಂಗಳ ಕಾಲವಕಾಶ ಹೊಸ ಅಧಿಕಾರಿಗಳಿಗೆ ನೀಡಬೇಕು. ಆ ನಂತರವಷ್ಟೇ ತೀರ್ಪು ನೀಡಲು ಸಾಧ್ಯವಾಗಲಿದೆ. ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…