ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲ ಖಮೇನಿ ಹತ್ಯೆ ವಿಚಾರ: ಖಮೇನಿ ಸುರಕ್ಷಿತ, ಆರೋಗ್ಯವಾಗಿದ್ದಾರೆ-  ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಫೈ

ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಈ ಕುರಿತು ಅವರು ಸಾಮಾಜಿ ಜಾಲತಾಣ ವೇದಿಕೆ ಟ್ರೂಥ್‌ನಲ್ಲಿ ತಿಳಿಸಿದ್ದಾರೆ.

ಖಮೇನಿ ಅವರ ಹತ್ಯೆಯಾಗಿದೆ ಎಂಬ ಇಸ್ರೇಲಿ ವರದಿಗಳ ಕುರಿತು ಇರಾನ್ ಸರ್ಕಾರದಿಂದ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಅಲ್ಲಿನ ಮಾಧ್ಯಮಗಳು ಈ ವರದಿಯನ್ನು ನಿರಾಕರಿಸಿವೆ.

ಇಸ್ರೇಲಿ ಮಾಧ್ಯಮಗಳ ವರದಿ ಪ್ರಕಾರ, ಪ್ರಸ್ತುತ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಅವರ ಮೃತದೇಹವೆಂದು ಹೇಳಲಾಗುತ್ತಿರುವ ಫೋಟೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ತೋರಿಸಲಾಗಿದೆ ಎಂದು ಕೆಲವು ಟಿವಿ ಮಾಧ್ಯಮಗಳು ತಿಳಿಸಿವೆ ಎಂದು ವರದಿಯಾಗಿದೆ.

ಆದರೆ, ಈ ಹೇಳಿಕೆಗಳಿಗೆ ಯಾವುದೇ ಸ್ವತಂತ್ರ ದೃಢೀಕರಣ ಲಭ್ಯವಾಗಿಲ್ಲ. ಇರಾನ್‌ ಸರ್ಕಾರವು ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಖಮೇನಿ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದೆ.

ಇರಾನ್‌ನ ಅಧ್ಯಕ್ಷ ಹಾಗೂ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಫೈ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಇರಾನ್‌ನ ಸರ್ಕಾರದ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಆಡಳಿತದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಬಫೈ ಸ್ಪಷ್ಟಪಡಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago