ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಈ ಕುರಿತು ಅವರು ಸಾಮಾಜಿ ಜಾಲತಾಣ ವೇದಿಕೆ ಟ್ರೂಥ್ನಲ್ಲಿ ತಿಳಿಸಿದ್ದಾರೆ.
ಖಮೇನಿ ಅವರ ಹತ್ಯೆಯಾಗಿದೆ ಎಂಬ ಇಸ್ರೇಲಿ ವರದಿಗಳ ಕುರಿತು ಇರಾನ್ ಸರ್ಕಾರದಿಂದ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಅಲ್ಲಿನ ಮಾಧ್ಯಮಗಳು ಈ ವರದಿಯನ್ನು ನಿರಾಕರಿಸಿವೆ.
ಇಸ್ರೇಲಿ ಮಾಧ್ಯಮಗಳ ವರದಿ ಪ್ರಕಾರ, ಪ್ರಸ್ತುತ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಅವರ ಮೃತದೇಹವೆಂದು ಹೇಳಲಾಗುತ್ತಿರುವ ಫೋಟೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ತೋರಿಸಲಾಗಿದೆ ಎಂದು ಕೆಲವು ಟಿವಿ ಮಾಧ್ಯಮಗಳು ತಿಳಿಸಿವೆ ಎಂದು ವರದಿಯಾಗಿದೆ.
ಆದರೆ, ಈ ಹೇಳಿಕೆಗಳಿಗೆ ಯಾವುದೇ ಸ್ವತಂತ್ರ ದೃಢೀಕರಣ ಲಭ್ಯವಾಗಿಲ್ಲ. ಇರಾನ್ ಸರ್ಕಾರವು ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಖಮೇನಿ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದೆ.
ಇರಾನ್ನ ಅಧ್ಯಕ್ಷ ಹಾಗೂ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಫೈ ಎಬಿಸಿ ನ್ಯೂಸ್ಗೆ ತಿಳಿಸಿದ್ದಾರೆ.
ಇರಾನ್ನ ಸರ್ಕಾರದ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಆಡಳಿತದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಬಫೈ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…