ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡನೆ: ಮೊಂಬತ್ತಿ ಹಿಡಿದು ಮೆರವಣಿಗೆ


ದೊಡ್ಡಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ನಗರದ ಕೋಟೆ ರಸ್ತೆಯಲ್ಲಿನ ಶಿಯಾ ಮುಸ್ಲಿಂ ಸಮುದಾಯದ ಮಸೀದಿಯಿಂದ ಸಿದ್ದಲಿಂಗಯ್ಯ ವೃತ್ತದವರೆಗೆ ಭಾನುವಾರ ಸಂಜೆ ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದರು.

ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿದ ಬರಹ,ಪೋಟೋಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಅಮೆರಿಕಾ,ಇಸ್ರೇಲ್ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮೆರವಣಿಗೆಯಲ್ಲಿ ಮಕ್ಕಳು ಸೇರಿದಂತೆ ವಯೋವೃದ್ಧರವರೆಗೂ ನೂರಾರು ಜನ ಭಾಗವಹಿಸಿದ್ದರು.

ಕೋಟೆ ಮಸೀದಿ ವತಿಯಿಂದ ಪ್ರತಿ ವರ್ಷ ನಡೆಯುವ ಮೊಹರಂ ಹಬ್ಬಕ್ಕೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ಜನ ಶಿಯಾ ಮುಸ್ಲಿಮರು ಕಾಲ್ನಡಿಗೆಯಲ್ಲಿ ಆಗಮಿಸಿ ಸಂಜೆ ನಡೆಯುವ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ.

Ramesh Babu

Journalist

Recent Posts

ನ್ಯಾ. ನಾಗಮೋಹನ್ ದಾಸ್ ವರದಿ ಅವೈಜ್ಞಾನಿಕ: ಒಳಮೀಸಲಾತಿ ತಾರತಮ್ಯ ಸರಿಪಡಿಸುವಂತೆ ಅಗ್ರಹಿಸಿ ಮಾ. 25ರಂದು ಪ್ರತಿಭಟನೆ – ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ನರೇಶ

ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…

7 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ವರ್ಷಗಳೇ ಕಳೆದರೂ ಸ್ವಚ್ಛತೆ ಕಾಣದ ಹಾದ್ರಿಪುರ ಕಾಲೋನಿ:‌ ಪಂಚಾಯಿತಿ ಎದುರು ಚರಂಡಿ ನೀರು ಇಟ್ಟು ಪ್ರತಿಭಟನೆ

ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…

12 hours ago

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ: ಹಬ್ಬ ಮುಗಿಸಿ ಬರ್ತಿದ್ದ ನಾಲ್ವರು ದಾರುಣ ಸಾವು…!

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…

18 hours ago

ಅಪಘಾತ ತಪ್ಪಿಸಲು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್ ಡಿಕ್ಕಿ

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಪದೇ ಪದೇ ಅಪಘಾತ ಪ್ರಕರಣಗಳು ಮರುಕಳಿಸುತ್ತಿವೆ....…

20 hours ago

ಮಾ.23ಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಬಜೆಟ್ ಪೂರ್ವಭಾವಿ ಸಭೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2026-27ನೇ ಸಾಲಿನ ಬಜೆಟ್ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಮಾ.23ರಂದು ಹಮ್ಮಿಕೊಳ್ಳಲಾಗಿದೆ. ಪಟ್ಟಣ…

1 day ago

ಹಾದ್ರೀಪುರ ಕ್ರಿಕೆಟ್ ಟೂರ್ನಮೆಂಟ್-2 ಯಶಸ್ವಿ: ‘ಜೈ ಆಂಜನೇಯ ತಂಡ ವಿಜೇತ’: ಕ್ರೀಡೆಯಿಂದ ಯುವಕರಲ್ಲಿ ಹೆಚ್ಚಾದ ಬಾಂಧವ್ಯ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ. ಈ ಕ್ರೀಡಾಕೂಟದಲ್ಲಿ ಜೈ…

1 day ago