ಇಲಾಖೆಗಳಿಗೆ ಬಿಡುಗಡೆಯಾದ ಹಣ ಸಂಪೂರ್ಣವಾಗಿ ಖರ್ಚು ಮಾಡಬೇಕು- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ.ಜಾಫರ್

2024-25ನೇ ಸಾಲಿಗೆ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಕ್ರಿಯಾಯೋಜನೆ, ಟೆಂಡರ್ ಪ್ರಕ್ರಿಯೆ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣ ಖರ್ಚು ಮಾಡುವ ಮೂಲಕ ಶೇಕಡ 100 ರಷ್ಟು ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಿ ಎಂದು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಪಿ.ಸಿ ಜಾಫರ್ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಲಾಖೆಗಳಿಗೆ ಬಿಡುಗಡೆಯಾದ ಹಣವನ್ನು ಸಂಪೂರ್ಣವಾಗಿ ಖರ್ಚು ಮಾಡಬೇಕು. ಮಾರ್ಚ್ ಅಂತ್ಯದವರೆಗೆ ಕಾಯದೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ಡಿಸೆಂಬರ್ ಅಂತ್ಯ ಅಥವಾ ಜನವರಿ ಮಾಹೆಯೊಳಗೆ ಶೇಕಡ 100 ರಷ್ಟು ಆರ್ಥಿಕ ಭೌತಿಕ ಪ್ರಗತಿ ಸಾಧಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

*ನರೇಗಾ ಯೋಜನೆಯ ಸದ್ಬಳಕೆ ಆಗಬೇಕು*
ನರೇಗಾ ಯೋಜನೆಯಡಿ ಹಲವು ಇಲಾಖೆಗಳಿಗೆ ಅನುದಾನ ಬಿಡುಗಡೆ ಆಗುತ್ತದೆ. ಅನುದಾನ ಸದ್ಬಳಕೆಯಾಗಬೇಕು. ಅರಣ್ಯ ಇಲಾಖೆಯಲ್ಲಿ ನರೇಗಾ ಯೋಜನೆಯಡಿ ಗಿಡ ನೆಡುವ ಅರಣ್ಯೀಕರಣ ಕಾರ್ಯಕ್ರಮ ಒಂದು ಉತ್ತಮ ಯೋಜನೆಯಾಗಿದೆ. ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ವಿಭಾಗವು ಹೆಚ್ಚು ಹೆಚ್ಚು ಸಸಿಗಳನ್ನು ನಾಟಿ ಮಾಡಿ ಬೇಡಿಕೆ ಅನುಗುಣವಾಗಿ ರೈತರಿಗೆ, ಸಾರ್ವಜನಿಕರಿಗೆ ಹಂಚಬೇಕು. ಹಾಗೆಯೇ ವಿವಿಧ ವನಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸರ್ಕಾರಿ ಜಾಗಗಳಲ್ಲಿ, ಬೆಟ್ಟಗುಡ್ಡಗಳಲ್ಲಿ, ಪ್ರವಾಸಿ ತಾಣಗಳಲ್ಲಿ, ರಸ್ತೆ ಬದಿಗಳಲ್ಲಿ ಹೆಚ್ಚೆಚ್ಚು ಸಸಿಗಳನ್ನು ನೆಡಬೇಕು. ನೆಟ್ಟ ನಂತರ ಸಸಿಗಳನ್ನು ಪೋಷಿಸಿ ಬೆಳೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರಸ್ತುತ ಈಗಿರುವ ವಾತಾವರಣ ಪರಿಸ್ಥಿತಿಯಲ್ಲಿ ಹವಾಮಾನ ವೈಪರೀತ್ಯ, ಪರಿಸರ ಸಂರಕ್ಷಣೆ, ಪ್ರಕೃತಿ ಸಮತೋಲನ ಕಾಪಾಡಲು ಗಿಡ ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಉಸ್ತುವಾರಿ ಕಾರ್ಯದರ್ಶಿಗಳು ಅಭಿಪ್ರಾಯ ಪಟ್ಟರು.
2024ರ ನರೇಗಾ ಯೋಜನೆಯಡಿ 5720 ಸಸಿಗಳನ್ನು ನೆಟ್ಟು, 26 ಕಿಮೀ ರಸ್ತೆ ಬದಿ ನೆಡುತೋಪು ನಿರ್ಮಾಣ ಮಾಡಲಾಗಿದೆ. 44.16 ಹೆಕ್ಟೇರ್ ಬ್ಲಾಕ್ ಪ್ಲಾಂಟೇಶನ್ ನೆಡುತೋಪು ನಿರ್ಮಾಣ ಮಾಡಲಾಗಿದೆ. 2025ರ ವೇಳೆಗೆ 42840 ಸಸಿ ನೆಡುವುದು, ಸಾರ್ವಜನಿಕರ ವಿತರಣೆಗಾಗಿ 1,28,660 ಸಸಿಗಳನ್ನು ತಾಲ್ಲೂಕು ನರ್ಸರಿಗಳಲ್ಲಿ ಬೆಳೆಸಲಾಗುತ್ತಿದೆ ಎಂದು ಅರಣ್ಯಾಧಿಕಾರಿ ಮಾಹಿತಿ ನೀಡಿದರು.

*ವಲಸಿಗರ ಮೇಲೆ ನಿಗಾ ವಹಿಸಿ*
ಜಿಲ್ಲೆಗೆ ಬೇರೆ ಪ್ರದೇಶದಿಂದ, ಬೇರೆ ರಾಜ್ಯದಿಂದ ಅಥವಾ ಬೇರೆ ರಾಷ್ಟ್ರಗಳಿಂದ ಉದ್ಯೋಗಕ್ಕೆ ಅಥವಾ ಇನ್ನಿತರ ಕಾರ್ಯ ಚಟುವಟಿಕೆಗಳಿಗೆ ಆಗಮಿಸುವ ವಲಸಿಗರ ಬಗ್ಗೆ ನಿಗಾ ವಹಿಸಿ. ಜಿಲ್ಲೆಯ ಯಾವ ಪ್ರದೇಶಗಳಲ್ಲಿ ವಲಸಿಗರು ವಾಸವಾಗಿದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕಿ ಯಾವ ಉದ್ದೇಶಕ್ಕಾಗಿ ಬಂದಿದ್ದಾರೆ, ಆರ್ಥಿಕ ಸ್ಥಿತಿಗತಿ, ಆರೋಗ್ಯ, ಶಿಕ್ಷಣ ಇವುಗಳ ಬಗ್ಗೆ ಮಾಹಿತಿ ಕಲೆ ಹಾಕಲು ಆರೋಗ್ಯ, ಕಾರ್ಮಿಕ, ಪೋಲಿಸ್ ಇಲಾಖೆಗೆ ಸೂಚಿಸಿದರು.

*ಸೆಪ್ಟೆಂಬರ್ ತಿಂಗಳಲ್ಲಿ ಕಡಿಮೆ ಮಳೆ*
ಪ್ರಸ್ತುತ ಸಾಲಿನಲ್ಲಿ ಜನವರಿ 01 ರಿಂದ ಸೆಪ್ಟೆಂಬರ್ 25 ರ ವರೆಗೆ 557 ಮಿ.ಮೀ ವಾಡಿಕೆ ಮಳೆಗೆ 535 ಮಿ.ಮೀ ಮಳೆಯಾಗಿದೆ. ಕಳೆದ ಏಳು ದಿನಗಳಲ್ಲಿ ಅಂದರೆ ಸೆಪ್ಟೆಂಬರ್ 19 ರಿಂದ 25 ರವರೆಗೆ 47.01 ಮಿ.ಮೀ ವಾಡಿಕೆ ಮಳೆಗೆ 23.04 ಮಿ.ಮೀ ಮಳೆಯಾಗಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಎಸ್.ಎಸ್.ಎಲ್.ಸಿ, ಪಿಯುಸಿ ಯಲ್ಲಿ ಈ ವರ್ಷ ಉತ್ತಮ ಫಲಿತಾಂಶ ಬರಲು ಯೋಜನೆ ರೂಪಿಸಿ. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡಿ. ಶಾಲಾ ಕಾಲೇಜು ಶಿಕ್ಷಕರಿಗೆ, ಮುಖ್ಯೋಪಾಧ್ಯಾಯರಾಗಿ, ಪ್ರಾಂಶುಪಾಲರಿಗೆ ಸೂಕ್ತ ತರಬೇತಿ, ಮಾರ್ಗಸೂಚಿಗಳನ್ನು ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗರಾಜ್, ಪ್ರಾದೇಶಿಕ ಅರಣ್ಯ ವಿಭಾಗದ ಉಪವಿಭಾಗಾಧಿಕಾರಿ ಸರೀನಾ ಸಿಕ್ಕಲಿಗಾರ್, ಉಪವಿಭಾಗಾಧಿಕಾರಿ ಎನ್. ದುರ್ಗಶ್ರೀ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

2 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

9 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

19 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

20 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

24 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

1 day ago