ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ, ಡಿವೈಎಸ್ ಪಿ ಕಚೇರಿ ಮುಂಭಾಗ ನೇಕಾರ ಮಳಿಗೆ ಕಾಮಗಾರಿ ಶಂಕುಸ್ಥಾಪನೆಗೆ ಬುಧವಾರ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನೇರವೇರಿಸಿದರು.
ಮತ್ತೊಂದೆಡೆ ಶಿಷ್ಟಾಚಾರ ಪಾಲನೆ ಮಾಡದೇ ಕಾಂಗ್ರೆಸ್ ಜನಪ್ರತಿನಿಧಿಗಳಿಗೆ ನಮಗೆ ಆಹ್ವಾನವಿಲ್ಲವೆಂದು ಆರೋಪಿಸಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಧೀರಜ್ ಮುನಿರಾಜ್ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆಯಿತು.
ಪ್ರತಿಭಟನಾ ನಿರತ ಕಾಂಗ್ರೆಸ್ ಮುಖಂಡರನ್ನು ಡಿವೈಎಸ್ಪಿ ಪಾಂಡುರಂಗ ಅವರು ಸಮಸ್ಯೆ ಕೇಳಿ ಮಾತನಾಡಿಸುವ ವೇಳೆ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಅವರು ಪ್ರಚೋದಾತ್ಮಕವಾಗಿ ಮಾತನಾಡಿರುವುದು ಕಂಡು ಬಂದಿದೆ.
ಇವತ್ತು ಯಾವುದಾದರೂ ಪ್ರಾಣ ಹೋಗುತ್ತೆ, ಇಲ್ಲವಾದಲ್ಲಿ ಬಳ್ಳಾರಿ ಘಟನೆಗಿಂತ ಹೆಚ್ಚಾಗುತ್ತೆ ಎಂದು ಡಿವೈಎಸ್ಪಿ ಪಾಂಡುರಂಗ, ಮಾಜಿ ಶಾಸಕ ವೆಂಕಟರಮಣಯ್ಯ ಮುಂದೆಯೇ ಮಾತನಾಡಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಂತಹ ಪ್ರಚೋದನಾತ್ಮಕ ಮಾತುಗಳನ್ನಾಡಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆವರು ಕ್ರಮ ಜರುಗಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…