ಇವರೇ ನೋಡಿ ದೊಡ್ಡಬಳ್ಳಾಪುರದಲ್ಲೂ ಚಾಲಕರ ಮೇಲೆ ಹಲ್ಲೆ ಮಾಡಿದ ಪುಂಡರು

ಲಾಂಗ್ ಹಿಡಿದು ಪುಂಡರಿಂದ ಕಾರ್ ಗ್ಲಾಸ್ ಒಡೆದು ಪುಂಡಾಟ ಮೆರೆಯುತ್ತಿರುವ ಪುಂಡರು. ಹವಾ ಮೇಟೈಂನ್ ಮಾಡ್ಬೇಕು ಎಂಬ ಹುಚ್ಚಿನಿಂದ ಹುಚ್ಚಾಟ ಮೆರೆದಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿಯ ವಾಲ್ಮೀಕಿನಗರ ಮತ್ತು ಎಪಿನಗರದ ಮುದ್ದಯ್ಯನಪಾಳ್ಯದಲ್ಲಿ ಕಾರ್ ಗ್ಲಾಸ್ ಒಡೆದು ಸುಮ್ಮನಾಗದ ಈ ಗ್ಯಾಂಗ್.. ಮಾದನಾಯಕನಹಳ್ಳಿಯ ಮಾಗಡಿ ರೋಡ್ ಲಿಮಿಟ್ಸ್ ನಲ್ಲಿ ಕ್ಯಾಂಟರ್ ನಲ್ಲಿ ಮಲಗಿದ್ದ ಚಾಲಕನ ಮೇಲೆ ಲಾಂಗ್ ಬೀಸಿ ಪರಾರಿಯಾಗಿದ್ದಾರೆ.

ಮೊದಲಿಗೆ ಲಾರಿ ಗ್ಲಾಸ್ ಹೊಡೆದಿರೊ ಈ ಗ್ಯಾಂಗ್.. ಚಾಲಕ ಮಲಗಿರೋದನ್ನ ಗಮನಿಸಿ ಹಣಕ್ಕಾಗಿ ಬೆದರಿಸಿದ್ದಾರೆ..

ಹಣ ತೆಗೆದು ಕೊಡುವಷ್ಟರಲ್ಲಿ ಲಾಂಗ್ ಬೀಸಿ ಕೈ ಕಟ್ ಮಾಡಿದ್ದಾರೆ. ಬಳಿಕ ಮೊಬೈಲ್ ಹಾಗು 5 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ…

ಆ ಬಳಿಕ ದೊಡ್ಡಬಳ್ಳಾಪುರದ ಬಳಿ ಕೂಡ ಲಾಂಗ್ ಬೀಸಿರೊ ಪುಂಡರು … ಸಿಕ್ಕ ಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್ ನಿಂದ ಬೆದರಿಸಿ ಹಣ ದರೋಡೆ ಮಾಡಿದ್ದಾರೆ.

ಇದೀಗ ಆರೋಪಿಗಳಿಗಾಗಿ ಎಪಿನಗರ, ಬ್ಯಾಡರಹಳ್ಳಿ, ಮಾದನಾಯಕನಹಳ್ಳಿ ಮತ್ತು ದೊಡ್ಡಬಳ್ಳಾಪುರ ಪೊಲೀಸ್ರಿಂದ ಹುಡುಕಾಟ ನಡೆಸಲಾಗುತ್ತಿದೆ.

ಬ್ಯಾಡರಹಳ್ಳಿ ಮತ್ತು ಅನ್ನಪೂರ್ಣೇಶ್ವರಿ ನಗರದಲ್ಲಿ ಕೇಸ್ ಗಳು ದಾಖಲಾಗಿದೆ. ಒಟ್ಟು ಹತ್ತಕ್ಕು ಹೆಚ್ಚು ಎಫ್ ಐ ಆರ್ ಗಳು ದಾಖಲಾಗಿವೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago