ಯಲಹಂಕ-ಹಿಂದೂಪುರ ಟೋಲ್ ರಸ್ತೆಯಲ್ಲಿ ವಾಹನ ಸವಾರರಿಂದ ಟೋಲ್ ಸುಂಕ ವಸೂಲಿ ಮಾಡುವ ಟೋಲ್ ನವರು, ತೆಗೆದುಕೊಂಡ ಹಣಕ್ಕೆ ಸೇವೆ ಕೊಡಲಾಗುತ್ತಿದಿಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ, ಟೋಲ್ ರಸ್ತೆಯಲ್ಲಿ ಬೀದಿ ದೀಪಗಳಿಲ್ಲ, ಸರ್ಕಲ್ ಗಳಲ್ಲಿ ಹೈಮಾಸ್ಟ್ ದೀಪಗಳಿಲ್ಲ, ರಸ್ತೆ ಬದಿಯಲ್ಲಿ ಚರಂಡಿ ಇಲ್ಲ, ಸ್ವಚ್ಛತೆಯೂ ಇಲ್ಲ, ಸೂಚನ ಫಲಕಗಳಿಲ್ಲ, ಟ್ರಾಫಿಕ್ ಸಿಗ್ನಲ್ ಗಳಿಲ್ಲ. ಅವ್ಯವಸ್ಥಿತವಾಗಿರುವ ಟೋಲ್ ರಸ್ತೆಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಕೇವಲ ವಾಹನ ಸವಾರರಿಂದ ಹಣ ಸಂಗ್ರಹಿಸುವುದಷ್ಟೇ ನಮ್ಮ ಕಾಯಕ, ಸೇವೆ ನೀಡುವುದು ನಮ್ಮ ಧರ್ಮ ಅಲ್ಲ, ಅಮಾಯಕ ವಾಹನ ಸವಾರರು ಸತ್ತರೇನು ಎಂಬ ಉಢಾಪೆಯಲ್ಲಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಟೋಲ್ ರಸ್ತೆಯ ವ್ಯಾಪ್ತಿಯಲ್ಲಿ ಬರುವು ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿಯವರೆಗೂ ಕಳೆದ 15 ದಿನಗಳಿಂದ ಬೀದಿ ದೀಪಗಳು ಉರಿಯುತ್ತಿಲ್ಲ.
ಯಲಹಂಕ-ಹಿಂದೂಪುರ ಟೋಲ್ ಸಂಸ್ಥೆ ಜನರ ರಕ್ತ ಹೀರುವ ಸಂಸ್ಥೆಯಾಗಿದೆ. ದೃಷ್ಟಿ ಬೊಂಬೆ ರೀತಿ ರಸ್ತೆಯ ವಿಭಜಕದ ಮೇಲೆ ಬೀದಿ ದೀಪಗಳನ್ನ ಹಾಕಲಾಗಿದೆ. ಕಳೆದ 15 ದಿನಗಳಿಂದ ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿವರೆಗೂ ಒಂದೇ ಒಂದು ಲೈಟ್ ಉರಿಯುತ್ತಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಎಪಿಎಂಸಿ ಗೆ ಸಾಕಷ್ಟು ರೈತರು ಬರುತ್ತಾರೆ. ಕೆಲವು ರೈತರು ಸೈಕಲ್ ನಲ್ಲಿ ಬರುತ್ತಾರೆ, ಕತ್ತಲ ರಸ್ತೆಯಲ್ಲಿ ಬರುವುದರಿಂದ ಟೋಲ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದೆ ಎಂದು ಸ್ಥಳೀಯ ಮುಖಂಡರಾದ ಮಹಮ್ಮದ್ ಆದಿಲ್ ಪಾಷಾ ಕಿಡಿಕಾರಿದ್ದಾರೆ.
ರಸ್ತೆಯಲ್ಲಿ ಕಸವನ್ನು ತೆಗೆಯುವುದಿಲ್ಲ, ರಸ್ತೆಯಲ್ಲಿನ ಹಳ್ಳಗಳನ್ನ ದುರಸ್ಥಿ ಮಾಡದೆ ಆಗೆಯೇ ಬಿಟ್ಟಿದ್ದಾರೆ, ಅಮಾಯಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಟೋಲ್ ನವರಿಗೆ ಮಾನವೀಯತೆಯೇ ಇಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…