ಯಲಹಂಕ-ಹಿಂದೂಪುರ ಟೋಲ್ ರಸ್ತೆಯಲ್ಲಿ ವಾಹನ ಸವಾರರಿಂದ ಟೋಲ್ ಸುಂಕ ವಸೂಲಿ ಮಾಡುವ ಟೋಲ್ ನವರು, ತೆಗೆದುಕೊಂಡ ಹಣಕ್ಕೆ ಸೇವೆ ಕೊಡಲಾಗುತ್ತಿದಿಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ, ಟೋಲ್ ರಸ್ತೆಯಲ್ಲಿ ಬೀದಿ ದೀಪಗಳಿಲ್ಲ, ಸರ್ಕಲ್ ಗಳಲ್ಲಿ ಹೈಮಾಸ್ಟ್ ದೀಪಗಳಿಲ್ಲ, ರಸ್ತೆ ಬದಿಯಲ್ಲಿ ಚರಂಡಿ ಇಲ್ಲ, ಸ್ವಚ್ಛತೆಯೂ ಇಲ್ಲ, ಸೂಚನ ಫಲಕಗಳಿಲ್ಲ, ಟ್ರಾಫಿಕ್ ಸಿಗ್ನಲ್ ಗಳಿಲ್ಲ. ಅವ್ಯವಸ್ಥಿತವಾಗಿರುವ ಟೋಲ್ ರಸ್ತೆಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಕೇವಲ ವಾಹನ ಸವಾರರಿಂದ ಹಣ ಸಂಗ್ರಹಿಸುವುದಷ್ಟೇ ನಮ್ಮ ಕಾಯಕ, ಸೇವೆ ನೀಡುವುದು ನಮ್ಮ ಧರ್ಮ ಅಲ್ಲ, ಅಮಾಯಕ ವಾಹನ ಸವಾರರು ಸತ್ತರೇನು ಎಂಬ ಉಢಾಪೆಯಲ್ಲಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಟೋಲ್ ರಸ್ತೆಯ ವ್ಯಾಪ್ತಿಯಲ್ಲಿ ಬರುವು ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿಯವರೆಗೂ ಕಳೆದ 15 ದಿನಗಳಿಂದ ಬೀದಿ ದೀಪಗಳು ಉರಿಯುತ್ತಿಲ್ಲ.
ಯಲಹಂಕ-ಹಿಂದೂಪುರ ಟೋಲ್ ಸಂಸ್ಥೆ ಜನರ ರಕ್ತ ಹೀರುವ ಸಂಸ್ಥೆಯಾಗಿದೆ. ದೃಷ್ಟಿ ಬೊಂಬೆ ರೀತಿ ರಸ್ತೆಯ ವಿಭಜಕದ ಮೇಲೆ ಬೀದಿ ದೀಪಗಳನ್ನ ಹಾಕಲಾಗಿದೆ. ಕಳೆದ 15 ದಿನಗಳಿಂದ ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿವರೆಗೂ ಒಂದೇ ಒಂದು ಲೈಟ್ ಉರಿಯುತ್ತಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಎಪಿಎಂಸಿ ಗೆ ಸಾಕಷ್ಟು ರೈತರು ಬರುತ್ತಾರೆ. ಕೆಲವು ರೈತರು ಸೈಕಲ್ ನಲ್ಲಿ ಬರುತ್ತಾರೆ, ಕತ್ತಲ ರಸ್ತೆಯಲ್ಲಿ ಬರುವುದರಿಂದ ಟೋಲ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದೆ ಎಂದು ಸ್ಥಳೀಯ ಮುಖಂಡರಾದ ಮಹಮ್ಮದ್ ಆದಿಲ್ ಪಾಷಾ ಕಿಡಿಕಾರಿದ್ದಾರೆ.
ರಸ್ತೆಯಲ್ಲಿ ಕಸವನ್ನು ತೆಗೆಯುವುದಿಲ್ಲ, ರಸ್ತೆಯಲ್ಲಿನ ಹಳ್ಳಗಳನ್ನ ದುರಸ್ಥಿ ಮಾಡದೆ ಆಗೆಯೇ ಬಿಟ್ಟಿದ್ದಾರೆ, ಅಮಾಯಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಟೋಲ್ ನವರಿಗೆ ಮಾನವೀಯತೆಯೇ ಇಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…