ಇವು ಹೆದ್ದಾರಿಯಲ್ಲಿರೋ ದೃಷ್ಟಿ ಬೊಂಬೆಗಳೋ, ಬೆಳಕು ನೀಡುವ ದೀಪಗಳೋ:  ಕಾಟಾಚಾರಕ್ಕೆ ಹೆದ್ದಾರಿ ವಿಭಜಕದ ಮೇಲೆ ಬೀದಿ ದೀಪಗಳ ಅಳವಡಿಕೆ: ಟೋಲ್ ನವರೇ ಏಕಿಷ್ಟು ನಿರ್ಲಕ್ಷ್ಯ..?- ಸಾರ್ವಜನಿಕರ ಆಕ್ರೋಶ

ಯಲಹಂಕ-ಹಿಂದೂಪುರ ಟೋಲ್ ರಸ್ತೆಯಲ್ಲಿ ವಾಹನ ಸವಾರರಿಂದ ಟೋಲ್ ಸುಂಕ ವಸೂಲಿ ಮಾಡುವ ಟೋಲ್ ನವರು, ತೆಗೆದುಕೊಂಡ ಹಣಕ್ಕೆ ಸೇವೆ ಕೊಡಲಾಗುತ್ತಿದಿಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ, ಟೋಲ್ ರಸ್ತೆಯಲ್ಲಿ ಬೀದಿ ದೀಪಗಳಿಲ್ಲ, ಸರ್ಕಲ್ ಗಳಲ್ಲಿ ಹೈಮಾಸ್ಟ್ ದೀಪಗಳಿಲ್ಲ, ರಸ್ತೆ ಬದಿಯಲ್ಲಿ ಚರಂಡಿ ಇಲ್ಲ, ಸ್ವಚ್ಛತೆಯೂ ಇಲ್ಲ, ಸೂಚನ ಫಲಕಗಳಿಲ್ಲ, ಟ್ರಾಫಿಕ್ ಸಿಗ್ನಲ್ ಗಳಿಲ್ಲ. ಅವ್ಯವಸ್ಥಿತವಾಗಿರುವ ಟೋಲ್ ರಸ್ತೆಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಕೇವಲ ವಾಹನ ಸವಾರರಿಂದ ಹಣ ಸಂಗ್ರಹಿಸುವುದಷ್ಟೇ ನಮ್ಮ ಕಾಯಕ, ಸೇವೆ ನೀಡುವುದು ನಮ್ಮ ಧರ್ಮ ಅಲ್ಲ, ಅಮಾಯಕ ವಾಹನ ಸವಾರರು ಸತ್ತರೇನು ಎಂಬ ಉಢಾಪೆಯಲ್ಲಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಟೋಲ್ ರಸ್ತೆಯ ವ್ಯಾಪ್ತಿಯಲ್ಲಿ ಬರುವು ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿಯವರೆಗೂ ಕಳೆದ 15 ದಿನಗಳಿಂದ ಬೀದಿ ದೀಪಗಳು ಉರಿಯುತ್ತಿಲ್ಲ.

ಯಲಹಂಕ-ಹಿಂದೂಪುರ ಟೋಲ್ ಸಂಸ್ಥೆ ಜನರ ರಕ್ತ ಹೀರುವ ಸಂಸ್ಥೆಯಾಗಿದೆ. ದೃಷ್ಟಿ ಬೊಂಬೆ ರೀತಿ ರಸ್ತೆಯ ವಿಭಜಕದ ಮೇಲೆ ಬೀದಿ ದೀಪಗಳನ್ನ ಹಾಕಲಾಗಿದೆ. ಕಳೆದ 15 ದಿನಗಳಿಂದ ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿವರೆಗೂ ಒಂದೇ ಒಂದು ಲೈಟ್ ಉರಿಯುತ್ತಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಎಪಿಎಂಸಿ ಗೆ ಸಾಕಷ್ಟು  ರೈತರು ಬರುತ್ತಾರೆ. ಕೆಲವು ರೈತರು ಸೈಕಲ್ ನಲ್ಲಿ ಬರುತ್ತಾರೆ, ಕತ್ತಲ ರಸ್ತೆಯಲ್ಲಿ ಬರುವುದರಿಂದ ಟೋಲ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದೆ ಎಂದು ಸ್ಥಳೀಯ ಮುಖಂಡರಾದ ಮಹಮ್ಮದ್ ಆದಿಲ್ ಪಾಷಾ ಕಿಡಿಕಾರಿದ್ದಾರೆ.

ರಸ್ತೆಯಲ್ಲಿ ಕಸವನ್ನು ತೆಗೆಯುವುದಿಲ್ಲ, ರಸ್ತೆಯಲ್ಲಿನ ಹಳ್ಳಗಳನ್ನ ದುರಸ್ಥಿ ಮಾಡದೆ ಆಗೆಯೇ ಬಿಟ್ಟಿದ್ದಾರೆ, ಅಮಾಯಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಟೋಲ್ ನವರಿಗೆ ಮಾನವೀಯತೆಯೇ ಇಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.

ಕಳೆದ 15 ದಿನಗಳ ಹಿಂದೆ ಯಲಹಂಕ-ಹಿಂದೂಪುರ ಟೋಲ್ ರಸ್ತೆಯ ಅವ್ಯವಸ್ಥೆ ಕಂಡು ಶಾಸಕ ಧೀರಜ್ ಮುನಿರಾಜು ಅವರು ಕೆಂಡಮಂಡಲರಾಗಿ ಟೋಲ್ ಮ್ಯಾನೇಜರ್ ಗೆ ಹಿಗ್ಗಾಮುಗ್ಗ ಜಾಡಿಸಿದರು. ಸಮಸ್ಯೆಗಳನ್ನ ಬಗೆಹರಿಸದಿದ್ದಲ್ಲಿ 15 ದಿನಕ್ಕೆ ಟೋಲ್ ನಿಲ್ಲಿಸ್ತಿನಿ, ನಿಂಗೆ 15 ದಿನ ಟೈಮ್ ಅಷ್ಟೆ, ನೀನು ಹೇಗೆ ಟೋಲ್ ಕಲೆಕ್ಟ್ ಮಾಡ್ತಿಯೋ ನೋಡ್ತಿನಿ ಎಂದು ಎಚ್ಚರಿಕೆಯನ್ನ ನೀಡಿದರು. ಆದರೆ, ವ್ಯವಸ್ಥೆಯ ವ್ಯಂಗ್ಯವೋ ಏನೋ, ಶಾಸಕರು ಎಚ್ಚರಿಕೆ ನೀಡಿದ ಕಳೆದ 15 ದಿನಗಳಿಂದ ಟೋಲ್ ರಸ್ತೆಯಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ, ಸ್ಥಳೀಯ ಶಾಸಕರಿಗೆ ಬೆಲೆ ಕೊಡದ ಟೋಲ್ ಸಂಸ್ಥೆಯವರು ಸಾರ್ವಜನಿಕರಿಗೆ ಬೆಲೆ ಕೊಡ್ತರಾ ಎನ್ನುವಂತಾಗಿದೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

9 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

17 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

22 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago