ಇವು ಹೆದ್ದಾರಿಯಲ್ಲಿರೋ ದೃಷ್ಟಿ ಬೊಂಬೆಗಳೋ, ಬೆಳಕು ನೀಡುವ ದೀಪಗಳೋ:  ಕಾಟಾಚಾರಕ್ಕೆ ಹೆದ್ದಾರಿ ವಿಭಜಕದ ಮೇಲೆ ಬೀದಿ ದೀಪಗಳ ಅಳವಡಿಕೆ: ಟೋಲ್ ನವರೇ ಏಕಿಷ್ಟು ನಿರ್ಲಕ್ಷ್ಯ..?- ಸಾರ್ವಜನಿಕರ ಆಕ್ರೋಶ

ಯಲಹಂಕ-ಹಿಂದೂಪುರ ಟೋಲ್ ರಸ್ತೆಯಲ್ಲಿ ವಾಹನ ಸವಾರರಿಂದ ಟೋಲ್ ಸುಂಕ ವಸೂಲಿ ಮಾಡುವ ಟೋಲ್ ನವರು, ತೆಗೆದುಕೊಂಡ ಹಣಕ್ಕೆ ಸೇವೆ ಕೊಡಲಾಗುತ್ತಿದಿಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ, ಟೋಲ್ ರಸ್ತೆಯಲ್ಲಿ ಬೀದಿ ದೀಪಗಳಿಲ್ಲ, ಸರ್ಕಲ್ ಗಳಲ್ಲಿ ಹೈಮಾಸ್ಟ್ ದೀಪಗಳಿಲ್ಲ, ರಸ್ತೆ ಬದಿಯಲ್ಲಿ ಚರಂಡಿ ಇಲ್ಲ, ಸ್ವಚ್ಛತೆಯೂ ಇಲ್ಲ, ಸೂಚನ ಫಲಕಗಳಿಲ್ಲ, ಟ್ರಾಫಿಕ್ ಸಿಗ್ನಲ್ ಗಳಿಲ್ಲ. ಅವ್ಯವಸ್ಥಿತವಾಗಿರುವ ಟೋಲ್ ರಸ್ತೆಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಕೇವಲ ವಾಹನ ಸವಾರರಿಂದ ಹಣ ಸಂಗ್ರಹಿಸುವುದಷ್ಟೇ ನಮ್ಮ ಕಾಯಕ, ಸೇವೆ ನೀಡುವುದು ನಮ್ಮ ಧರ್ಮ ಅಲ್ಲ, ಅಮಾಯಕ ವಾಹನ ಸವಾರರು ಸತ್ತರೇನು ಎಂಬ ಉಢಾಪೆಯಲ್ಲಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಟೋಲ್ ರಸ್ತೆಯ ವ್ಯಾಪ್ತಿಯಲ್ಲಿ ಬರುವು ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿಯವರೆಗೂ ಕಳೆದ 15 ದಿನಗಳಿಂದ ಬೀದಿ ದೀಪಗಳು ಉರಿಯುತ್ತಿಲ್ಲ.

ಯಲಹಂಕ-ಹಿಂದೂಪುರ ಟೋಲ್ ಸಂಸ್ಥೆ ಜನರ ರಕ್ತ ಹೀರುವ ಸಂಸ್ಥೆಯಾಗಿದೆ. ದೃಷ್ಟಿ ಬೊಂಬೆ ರೀತಿ ರಸ್ತೆಯ ವಿಭಜಕದ ಮೇಲೆ ಬೀದಿ ದೀಪಗಳನ್ನ ಹಾಕಲಾಗಿದೆ. ಕಳೆದ 15 ದಿನಗಳಿಂದ ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿವರೆಗೂ ಒಂದೇ ಒಂದು ಲೈಟ್ ಉರಿಯುತ್ತಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಎಪಿಎಂಸಿ ಗೆ ಸಾಕಷ್ಟು  ರೈತರು ಬರುತ್ತಾರೆ. ಕೆಲವು ರೈತರು ಸೈಕಲ್ ನಲ್ಲಿ ಬರುತ್ತಾರೆ, ಕತ್ತಲ ರಸ್ತೆಯಲ್ಲಿ ಬರುವುದರಿಂದ ಟೋಲ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದೆ ಎಂದು ಸ್ಥಳೀಯ ಮುಖಂಡರಾದ ಮಹಮ್ಮದ್ ಆದಿಲ್ ಪಾಷಾ ಕಿಡಿಕಾರಿದ್ದಾರೆ.

ರಸ್ತೆಯಲ್ಲಿ ಕಸವನ್ನು ತೆಗೆಯುವುದಿಲ್ಲ, ರಸ್ತೆಯಲ್ಲಿನ ಹಳ್ಳಗಳನ್ನ ದುರಸ್ಥಿ ಮಾಡದೆ ಆಗೆಯೇ ಬಿಟ್ಟಿದ್ದಾರೆ, ಅಮಾಯಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಟೋಲ್ ನವರಿಗೆ ಮಾನವೀಯತೆಯೇ ಇಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.

ಕಳೆದ 15 ದಿನಗಳ ಹಿಂದೆ ಯಲಹಂಕ-ಹಿಂದೂಪುರ ಟೋಲ್ ರಸ್ತೆಯ ಅವ್ಯವಸ್ಥೆ ಕಂಡು ಶಾಸಕ ಧೀರಜ್ ಮುನಿರಾಜು ಅವರು ಕೆಂಡಮಂಡಲರಾಗಿ ಟೋಲ್ ಮ್ಯಾನೇಜರ್ ಗೆ ಹಿಗ್ಗಾಮುಗ್ಗ ಜಾಡಿಸಿದರು. ಸಮಸ್ಯೆಗಳನ್ನ ಬಗೆಹರಿಸದಿದ್ದಲ್ಲಿ 15 ದಿನಕ್ಕೆ ಟೋಲ್ ನಿಲ್ಲಿಸ್ತಿನಿ, ನಿಂಗೆ 15 ದಿನ ಟೈಮ್ ಅಷ್ಟೆ, ನೀನು ಹೇಗೆ ಟೋಲ್ ಕಲೆಕ್ಟ್ ಮಾಡ್ತಿಯೋ ನೋಡ್ತಿನಿ ಎಂದು ಎಚ್ಚರಿಕೆಯನ್ನ ನೀಡಿದರು. ಆದರೆ, ವ್ಯವಸ್ಥೆಯ ವ್ಯಂಗ್ಯವೋ ಏನೋ, ಶಾಸಕರು ಎಚ್ಚರಿಕೆ ನೀಡಿದ ಕಳೆದ 15 ದಿನಗಳಿಂದ ಟೋಲ್ ರಸ್ತೆಯಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ, ಸ್ಥಳೀಯ ಶಾಸಕರಿಗೆ ಬೆಲೆ ಕೊಡದ ಟೋಲ್ ಸಂಸ್ಥೆಯವರು ಸಾರ್ವಜನಿಕರಿಗೆ ಬೆಲೆ ಕೊಡ್ತರಾ ಎನ್ನುವಂತಾಗಿದೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

7 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

12 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

14 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

16 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

19 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago