ಇವು ಹೆದ್ದಾರಿಯಲ್ಲಿರೋ ದೃಷ್ಟಿ ಬೊಂಬೆಗಳೋ, ಬೆಳಕು ನೀಡುವ ದೀಪಗಳೋ:  ಕಾಟಾಚಾರಕ್ಕೆ ಹೆದ್ದಾರಿ ವಿಭಜಕದ ಮೇಲೆ ಬೀದಿ ದೀಪಗಳ ಅಳವಡಿಕೆ: ಟೋಲ್ ನವರೇ ಏಕಿಷ್ಟು ನಿರ್ಲಕ್ಷ್ಯ..?- ಸಾರ್ವಜನಿಕರ ಆಕ್ರೋಶ

ಯಲಹಂಕ-ಹಿಂದೂಪುರ ಟೋಲ್ ರಸ್ತೆಯಲ್ಲಿ ವಾಹನ ಸವಾರರಿಂದ ಟೋಲ್ ಸುಂಕ ವಸೂಲಿ ಮಾಡುವ ಟೋಲ್ ನವರು, ತೆಗೆದುಕೊಂಡ ಹಣಕ್ಕೆ ಸೇವೆ ಕೊಡಲಾಗುತ್ತಿದಿಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ, ಟೋಲ್ ರಸ್ತೆಯಲ್ಲಿ ಬೀದಿ ದೀಪಗಳಿಲ್ಲ, ಸರ್ಕಲ್ ಗಳಲ್ಲಿ ಹೈಮಾಸ್ಟ್ ದೀಪಗಳಿಲ್ಲ, ರಸ್ತೆ ಬದಿಯಲ್ಲಿ ಚರಂಡಿ ಇಲ್ಲ, ಸ್ವಚ್ಛತೆಯೂ ಇಲ್ಲ, ಸೂಚನ ಫಲಕಗಳಿಲ್ಲ, ಟ್ರಾಫಿಕ್ ಸಿಗ್ನಲ್ ಗಳಿಲ್ಲ. ಅವ್ಯವಸ್ಥಿತವಾಗಿರುವ ಟೋಲ್ ರಸ್ತೆಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಕೇವಲ ವಾಹನ ಸವಾರರಿಂದ ಹಣ ಸಂಗ್ರಹಿಸುವುದಷ್ಟೇ ನಮ್ಮ ಕಾಯಕ, ಸೇವೆ ನೀಡುವುದು ನಮ್ಮ ಧರ್ಮ ಅಲ್ಲ, ಅಮಾಯಕ ವಾಹನ ಸವಾರರು ಸತ್ತರೇನು ಎಂಬ ಉಢಾಪೆಯಲ್ಲಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಟೋಲ್ ರಸ್ತೆಯ ವ್ಯಾಪ್ತಿಯಲ್ಲಿ ಬರುವು ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿಯವರೆಗೂ ಕಳೆದ 15 ದಿನಗಳಿಂದ ಬೀದಿ ದೀಪಗಳು ಉರಿಯುತ್ತಿಲ್ಲ.

ಯಲಹಂಕ-ಹಿಂದೂಪುರ ಟೋಲ್ ಸಂಸ್ಥೆ ಜನರ ರಕ್ತ ಹೀರುವ ಸಂಸ್ಥೆಯಾಗಿದೆ. ದೃಷ್ಟಿ ಬೊಂಬೆ ರೀತಿ ರಸ್ತೆಯ ವಿಭಜಕದ ಮೇಲೆ ಬೀದಿ ದೀಪಗಳನ್ನ ಹಾಕಲಾಗಿದೆ. ಕಳೆದ 15 ದಿನಗಳಿಂದ ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿವರೆಗೂ ಒಂದೇ ಒಂದು ಲೈಟ್ ಉರಿಯುತ್ತಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಎಪಿಎಂಸಿ ಗೆ ಸಾಕಷ್ಟು  ರೈತರು ಬರುತ್ತಾರೆ. ಕೆಲವು ರೈತರು ಸೈಕಲ್ ನಲ್ಲಿ ಬರುತ್ತಾರೆ, ಕತ್ತಲ ರಸ್ತೆಯಲ್ಲಿ ಬರುವುದರಿಂದ ಟೋಲ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದೆ ಎಂದು ಸ್ಥಳೀಯ ಮುಖಂಡರಾದ ಮಹಮ್ಮದ್ ಆದಿಲ್ ಪಾಷಾ ಕಿಡಿಕಾರಿದ್ದಾರೆ.

ರಸ್ತೆಯಲ್ಲಿ ಕಸವನ್ನು ತೆಗೆಯುವುದಿಲ್ಲ, ರಸ್ತೆಯಲ್ಲಿನ ಹಳ್ಳಗಳನ್ನ ದುರಸ್ಥಿ ಮಾಡದೆ ಆಗೆಯೇ ಬಿಟ್ಟಿದ್ದಾರೆ, ಅಮಾಯಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಟೋಲ್ ನವರಿಗೆ ಮಾನವೀಯತೆಯೇ ಇಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.

ಕಳೆದ 15 ದಿನಗಳ ಹಿಂದೆ ಯಲಹಂಕ-ಹಿಂದೂಪುರ ಟೋಲ್ ರಸ್ತೆಯ ಅವ್ಯವಸ್ಥೆ ಕಂಡು ಶಾಸಕ ಧೀರಜ್ ಮುನಿರಾಜು ಅವರು ಕೆಂಡಮಂಡಲರಾಗಿ ಟೋಲ್ ಮ್ಯಾನೇಜರ್ ಗೆ ಹಿಗ್ಗಾಮುಗ್ಗ ಜಾಡಿಸಿದರು. ಸಮಸ್ಯೆಗಳನ್ನ ಬಗೆಹರಿಸದಿದ್ದಲ್ಲಿ 15 ದಿನಕ್ಕೆ ಟೋಲ್ ನಿಲ್ಲಿಸ್ತಿನಿ, ನಿಂಗೆ 15 ದಿನ ಟೈಮ್ ಅಷ್ಟೆ, ನೀನು ಹೇಗೆ ಟೋಲ್ ಕಲೆಕ್ಟ್ ಮಾಡ್ತಿಯೋ ನೋಡ್ತಿನಿ ಎಂದು ಎಚ್ಚರಿಕೆಯನ್ನ ನೀಡಿದರು. ಆದರೆ, ವ್ಯವಸ್ಥೆಯ ವ್ಯಂಗ್ಯವೋ ಏನೋ, ಶಾಸಕರು ಎಚ್ಚರಿಕೆ ನೀಡಿದ ಕಳೆದ 15 ದಿನಗಳಿಂದ ಟೋಲ್ ರಸ್ತೆಯಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ, ಸ್ಥಳೀಯ ಶಾಸಕರಿಗೆ ಬೆಲೆ ಕೊಡದ ಟೋಲ್ ಸಂಸ್ಥೆಯವರು ಸಾರ್ವಜನಿಕರಿಗೆ ಬೆಲೆ ಕೊಡ್ತರಾ ಎನ್ನುವಂತಾಗಿದೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

16 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

20 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago