ಯಲಹಂಕ-ಹಿಂದೂಪುರ ಟೋಲ್ ರಸ್ತೆಯಲ್ಲಿ ವಾಹನ ಸವಾರರಿಂದ ಟೋಲ್ ಸುಂಕ ವಸೂಲಿ ಮಾಡುವ ಟೋಲ್ ನವರು, ತೆಗೆದುಕೊಂಡ ಹಣಕ್ಕೆ ಸೇವೆ ಕೊಡಲಾಗುತ್ತಿದಿಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ, ಟೋಲ್ ರಸ್ತೆಯಲ್ಲಿ ಬೀದಿ ದೀಪಗಳಿಲ್ಲ, ಸರ್ಕಲ್ ಗಳಲ್ಲಿ ಹೈಮಾಸ್ಟ್ ದೀಪಗಳಿಲ್ಲ, ರಸ್ತೆ ಬದಿಯಲ್ಲಿ ಚರಂಡಿ ಇಲ್ಲ, ಸ್ವಚ್ಛತೆಯೂ ಇಲ್ಲ, ಸೂಚನ ಫಲಕಗಳಿಲ್ಲ, ಟ್ರಾಫಿಕ್ ಸಿಗ್ನಲ್ ಗಳಿಲ್ಲ. ಅವ್ಯವಸ್ಥಿತವಾಗಿರುವ ಟೋಲ್ ರಸ್ತೆಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಕೇವಲ ವಾಹನ ಸವಾರರಿಂದ ಹಣ ಸಂಗ್ರಹಿಸುವುದಷ್ಟೇ ನಮ್ಮ ಕಾಯಕ, ಸೇವೆ ನೀಡುವುದು ನಮ್ಮ ಧರ್ಮ ಅಲ್ಲ, ಅಮಾಯಕ ವಾಹನ ಸವಾರರು ಸತ್ತರೇನು ಎಂಬ ಉಢಾಪೆಯಲ್ಲಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಟೋಲ್ ರಸ್ತೆಯ ವ್ಯಾಪ್ತಿಯಲ್ಲಿ ಬರುವು ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿಯವರೆಗೂ ಕಳೆದ 15 ದಿನಗಳಿಂದ ಬೀದಿ ದೀಪಗಳು ಉರಿಯುತ್ತಿಲ್ಲ.
ಯಲಹಂಕ-ಹಿಂದೂಪುರ ಟೋಲ್ ಸಂಸ್ಥೆ ಜನರ ರಕ್ತ ಹೀರುವ ಸಂಸ್ಥೆಯಾಗಿದೆ. ದೃಷ್ಟಿ ಬೊಂಬೆ ರೀತಿ ರಸ್ತೆಯ ವಿಭಜಕದ ಮೇಲೆ ಬೀದಿ ದೀಪಗಳನ್ನ ಹಾಕಲಾಗಿದೆ. ಕಳೆದ 15 ದಿನಗಳಿಂದ ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿವರೆಗೂ ಒಂದೇ ಒಂದು ಲೈಟ್ ಉರಿಯುತ್ತಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಎಪಿಎಂಸಿ ಗೆ ಸಾಕಷ್ಟು ರೈತರು ಬರುತ್ತಾರೆ. ಕೆಲವು ರೈತರು ಸೈಕಲ್ ನಲ್ಲಿ ಬರುತ್ತಾರೆ, ಕತ್ತಲ ರಸ್ತೆಯಲ್ಲಿ ಬರುವುದರಿಂದ ಟೋಲ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದೆ ಎಂದು ಸ್ಥಳೀಯ ಮುಖಂಡರಾದ ಮಹಮ್ಮದ್ ಆದಿಲ್ ಪಾಷಾ ಕಿಡಿಕಾರಿದ್ದಾರೆ.
ರಸ್ತೆಯಲ್ಲಿ ಕಸವನ್ನು ತೆಗೆಯುವುದಿಲ್ಲ, ರಸ್ತೆಯಲ್ಲಿನ ಹಳ್ಳಗಳನ್ನ ದುರಸ್ಥಿ ಮಾಡದೆ ಆಗೆಯೇ ಬಿಟ್ಟಿದ್ದಾರೆ, ಅಮಾಯಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಟೋಲ್ ನವರಿಗೆ ಮಾನವೀಯತೆಯೇ ಇಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…