ಯಲಹಂಕ-ಹಿಂದೂಪುರ ಟೋಲ್ ರಸ್ತೆಯಲ್ಲಿ ವಾಹನ ಸವಾರರಿಂದ ಟೋಲ್ ಸುಂಕ ವಸೂಲಿ ಮಾಡುವ ಟೋಲ್ ನವರು, ತೆಗೆದುಕೊಂಡ ಹಣಕ್ಕೆ ಸೇವೆ ಕೊಡಲಾಗುತ್ತಿದಿಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ, ಟೋಲ್ ರಸ್ತೆಯಲ್ಲಿ ಬೀದಿ ದೀಪಗಳಿಲ್ಲ, ಸರ್ಕಲ್ ಗಳಲ್ಲಿ ಹೈಮಾಸ್ಟ್ ದೀಪಗಳಿಲ್ಲ, ರಸ್ತೆ ಬದಿಯಲ್ಲಿ ಚರಂಡಿ ಇಲ್ಲ, ಸ್ವಚ್ಛತೆಯೂ ಇಲ್ಲ, ಸೂಚನ ಫಲಕಗಳಿಲ್ಲ, ಟ್ರಾಫಿಕ್ ಸಿಗ್ನಲ್ ಗಳಿಲ್ಲ. ಅವ್ಯವಸ್ಥಿತವಾಗಿರುವ ಟೋಲ್ ರಸ್ತೆಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಕೇವಲ ವಾಹನ ಸವಾರರಿಂದ ಹಣ ಸಂಗ್ರಹಿಸುವುದಷ್ಟೇ ನಮ್ಮ ಕಾಯಕ, ಸೇವೆ ನೀಡುವುದು ನಮ್ಮ ಧರ್ಮ ಅಲ್ಲ, ಅಮಾಯಕ ವಾಹನ ಸವಾರರು ಸತ್ತರೇನು ಎಂಬ ಉಢಾಪೆಯಲ್ಲಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಟೋಲ್ ರಸ್ತೆಯ ವ್ಯಾಪ್ತಿಯಲ್ಲಿ ಬರುವು ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿಯವರೆಗೂ ಕಳೆದ 15 ದಿನಗಳಿಂದ ಬೀದಿ ದೀಪಗಳು ಉರಿಯುತ್ತಿಲ್ಲ.
ಯಲಹಂಕ-ಹಿಂದೂಪುರ ಟೋಲ್ ಸಂಸ್ಥೆ ಜನರ ರಕ್ತ ಹೀರುವ ಸಂಸ್ಥೆಯಾಗಿದೆ. ದೃಷ್ಟಿ ಬೊಂಬೆ ರೀತಿ ರಸ್ತೆಯ ವಿಭಜಕದ ಮೇಲೆ ಬೀದಿ ದೀಪಗಳನ್ನ ಹಾಕಲಾಗಿದೆ. ಕಳೆದ 15 ದಿನಗಳಿಂದ ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿವರೆಗೂ ಒಂದೇ ಒಂದು ಲೈಟ್ ಉರಿಯುತ್ತಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಎಪಿಎಂಸಿ ಗೆ ಸಾಕಷ್ಟು ರೈತರು ಬರುತ್ತಾರೆ. ಕೆಲವು ರೈತರು ಸೈಕಲ್ ನಲ್ಲಿ ಬರುತ್ತಾರೆ, ಕತ್ತಲ ರಸ್ತೆಯಲ್ಲಿ ಬರುವುದರಿಂದ ಟೋಲ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದೆ ಎಂದು ಸ್ಥಳೀಯ ಮುಖಂಡರಾದ ಮಹಮ್ಮದ್ ಆದಿಲ್ ಪಾಷಾ ಕಿಡಿಕಾರಿದ್ದಾರೆ.
ರಸ್ತೆಯಲ್ಲಿ ಕಸವನ್ನು ತೆಗೆಯುವುದಿಲ್ಲ, ರಸ್ತೆಯಲ್ಲಿನ ಹಳ್ಳಗಳನ್ನ ದುರಸ್ಥಿ ಮಾಡದೆ ಆಗೆಯೇ ಬಿಟ್ಟಿದ್ದಾರೆ, ಅಮಾಯಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಟೋಲ್ ನವರಿಗೆ ಮಾನವೀಯತೆಯೇ ಇಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…