ಇವು ಹೆದ್ದಾರಿಯಲ್ಲಿರೋ ದೃಷ್ಟಿ ಬೊಂಬೆಗಳೋ, ಬೆಳಕು ನೀಡುವ ದೀಪಗಳೋ:  ಕಾಟಾಚಾರಕ್ಕೆ ಹೆದ್ದಾರಿ ವಿಭಜಕದ ಮೇಲೆ ಬೀದಿ ದೀಪಗಳ ಅಳವಡಿಕೆ: ಟೋಲ್ ನವರೇ ಏಕಿಷ್ಟು ನಿರ್ಲಕ್ಷ್ಯ..?- ಸಾರ್ವಜನಿಕರ ಆಕ್ರೋಶ

ಯಲಹಂಕ-ಹಿಂದೂಪುರ ಟೋಲ್ ರಸ್ತೆಯಲ್ಲಿ ವಾಹನ ಸವಾರರಿಂದ ಟೋಲ್ ಸುಂಕ ವಸೂಲಿ ಮಾಡುವ ಟೋಲ್ ನವರು, ತೆಗೆದುಕೊಂಡ ಹಣಕ್ಕೆ ಸೇವೆ ಕೊಡಲಾಗುತ್ತಿದಿಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ, ಟೋಲ್ ರಸ್ತೆಯಲ್ಲಿ ಬೀದಿ ದೀಪಗಳಿಲ್ಲ, ಸರ್ಕಲ್ ಗಳಲ್ಲಿ ಹೈಮಾಸ್ಟ್ ದೀಪಗಳಿಲ್ಲ, ರಸ್ತೆ ಬದಿಯಲ್ಲಿ ಚರಂಡಿ ಇಲ್ಲ, ಸ್ವಚ್ಛತೆಯೂ ಇಲ್ಲ, ಸೂಚನ ಫಲಕಗಳಿಲ್ಲ, ಟ್ರಾಫಿಕ್ ಸಿಗ್ನಲ್ ಗಳಿಲ್ಲ. ಅವ್ಯವಸ್ಥಿತವಾಗಿರುವ ಟೋಲ್ ರಸ್ತೆಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಕೇವಲ ವಾಹನ ಸವಾರರಿಂದ ಹಣ ಸಂಗ್ರಹಿಸುವುದಷ್ಟೇ ನಮ್ಮ ಕಾಯಕ, ಸೇವೆ ನೀಡುವುದು ನಮ್ಮ ಧರ್ಮ ಅಲ್ಲ, ಅಮಾಯಕ ವಾಹನ ಸವಾರರು ಸತ್ತರೇನು ಎಂಬ ಉಢಾಪೆಯಲ್ಲಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಟೋಲ್ ರಸ್ತೆಯ ವ್ಯಾಪ್ತಿಯಲ್ಲಿ ಬರುವು ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿಯವರೆಗೂ ಕಳೆದ 15 ದಿನಗಳಿಂದ ಬೀದಿ ದೀಪಗಳು ಉರಿಯುತ್ತಿಲ್ಲ.

ಯಲಹಂಕ-ಹಿಂದೂಪುರ ಟೋಲ್ ಸಂಸ್ಥೆ ಜನರ ರಕ್ತ ಹೀರುವ ಸಂಸ್ಥೆಯಾಗಿದೆ. ದೃಷ್ಟಿ ಬೊಂಬೆ ರೀತಿ ರಸ್ತೆಯ ವಿಭಜಕದ ಮೇಲೆ ಬೀದಿ ದೀಪಗಳನ್ನ ಹಾಕಲಾಗಿದೆ. ಕಳೆದ 15 ದಿನಗಳಿಂದ ಟಿ.ಬಿ ಸರ್ಕಲ್ ನಿಂದ ಪಾಲನಜೋಗಹಳ್ಳಿವರೆಗೂ ಒಂದೇ ಒಂದು ಲೈಟ್ ಉರಿಯುತ್ತಿಲ್ಲ. ಮುಂಜಾನೆ 4 ಗಂಟೆ ಸಮಯದಲ್ಲಿ ಎಪಿಎಂಸಿ ಗೆ ಸಾಕಷ್ಟು  ರೈತರು ಬರುತ್ತಾರೆ. ಕೆಲವು ರೈತರು ಸೈಕಲ್ ನಲ್ಲಿ ಬರುತ್ತಾರೆ, ಕತ್ತಲ ರಸ್ತೆಯಲ್ಲಿ ಬರುವುದರಿಂದ ಟೋಲ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದೆ ಎಂದು ಸ್ಥಳೀಯ ಮುಖಂಡರಾದ ಮಹಮ್ಮದ್ ಆದಿಲ್ ಪಾಷಾ ಕಿಡಿಕಾರಿದ್ದಾರೆ.

ರಸ್ತೆಯಲ್ಲಿ ಕಸವನ್ನು ತೆಗೆಯುವುದಿಲ್ಲ, ರಸ್ತೆಯಲ್ಲಿನ ಹಳ್ಳಗಳನ್ನ ದುರಸ್ಥಿ ಮಾಡದೆ ಆಗೆಯೇ ಬಿಟ್ಟಿದ್ದಾರೆ, ಅಮಾಯಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಟೋಲ್ ನವರಿಗೆ ಮಾನವೀಯತೆಯೇ ಇಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.

ಕಳೆದ 15 ದಿನಗಳ ಹಿಂದೆ ಯಲಹಂಕ-ಹಿಂದೂಪುರ ಟೋಲ್ ರಸ್ತೆಯ ಅವ್ಯವಸ್ಥೆ ಕಂಡು ಶಾಸಕ ಧೀರಜ್ ಮುನಿರಾಜು ಅವರು ಕೆಂಡಮಂಡಲರಾಗಿ ಟೋಲ್ ಮ್ಯಾನೇಜರ್ ಗೆ ಹಿಗ್ಗಾಮುಗ್ಗ ಜಾಡಿಸಿದರು. ಸಮಸ್ಯೆಗಳನ್ನ ಬಗೆಹರಿಸದಿದ್ದಲ್ಲಿ 15 ದಿನಕ್ಕೆ ಟೋಲ್ ನಿಲ್ಲಿಸ್ತಿನಿ, ನಿಂಗೆ 15 ದಿನ ಟೈಮ್ ಅಷ್ಟೆ, ನೀನು ಹೇಗೆ ಟೋಲ್ ಕಲೆಕ್ಟ್ ಮಾಡ್ತಿಯೋ ನೋಡ್ತಿನಿ ಎಂದು ಎಚ್ಚರಿಕೆಯನ್ನ ನೀಡಿದರು. ಆದರೆ, ವ್ಯವಸ್ಥೆಯ ವ್ಯಂಗ್ಯವೋ ಏನೋ, ಶಾಸಕರು ಎಚ್ಚರಿಕೆ ನೀಡಿದ ಕಳೆದ 15 ದಿನಗಳಿಂದ ಟೋಲ್ ರಸ್ತೆಯಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ, ಸ್ಥಳೀಯ ಶಾಸಕರಿಗೆ ಬೆಲೆ ಕೊಡದ ಟೋಲ್ ಸಂಸ್ಥೆಯವರು ಸಾರ್ವಜನಿಕರಿಗೆ ಬೆಲೆ ಕೊಡ್ತರಾ ಎನ್ನುವಂತಾಗಿದೆ.

Ramesh Babu

Journalist

Recent Posts

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು….

ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…

6 hours ago

ಬೆಂ.ಗ್ರಾ ಜಿ.ಪಂ ನೂತನ ಸಿ.ಇ.ಒ ಡಾ.ವಸಂತಿ ಅಮರ್ ಬಿ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

18 hours ago

ನಾಳೆ( ಏ.19ಕ್ಕೆ) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…

20 hours ago

ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆ: ಬಾಲ್ಯವಿವಾಹ ತಡೆಗೆ ಜಾಗೃತಿ ಅಗತ್ಯ- ಡಿಸಿ ಡಾ. ಕೆ.ಎನ್ ಅನುರಾಧ

ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…

20 hours ago

ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…

1 day ago

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ: ಟ್ರ್ಯಾಕ್ಟರ್ ಚಾಲಕ ಸಾವು

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…

1 day ago