ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಮತ್ತು ಮರ್ಯಾದಾ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ-2026 ಅನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಂತರ್ಜಾತಿ ವಿವಾಹಗಳ ಮೂಲಕ ಅವರ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವವರ, ವಿಶೇಷವಾಗಿ ಯುವ ವಯಸ್ಕರ ವಿರುದ್ಧ ಮರ್ಯಾದೆಗೇಡು ಹತ್ಯೆಗಳನ್ನು ಒಳಗೊಂಡಂತೆ ಕ್ರೂರ ಸ್ವರೂಪದ ಹಿಂಸಾಚಾರಗಳು ವ್ಯಕ್ತವಾಗುತ್ತಿರುವುದು ಮುಂದುವರಿಯುತ್ತಿದ್ದು, ಕೊಲೆ, ಹಲ್ಲೆ, ಜೀವಂತ ಹೆಣ್ಣುಮಕ್ಕಳಿಗೆ ಮರಣದ ಆಚರಣೆಗಳನ್ನು (ತಿಥಿ) ಮಾಡುವುದು, ಕಾನೂನುಬದ್ಧ ಪಿತ್ರಾರ್ಜಿತ ಹಕ್ಕುಗಳನ್ನು ನಿರಾಕರಿಸುವುದು, ಸಾಮಾಜಿಕ ಬಹಿಷ್ಕಾರ, ವಿಷಪ್ರಾಶನದ ಮೂಲಕ ಅಥವಾ ಇತರ ನಿಗೂಢ ವಿಧಾನಗಳ ಮೂಲಕ ಹಾನಿಯನ್ನುಂಟು ಮಾಡುವುದು ಹೀಗೆ ಎಲ್ಲಾ ವಿಧದ ಅಮಾನವೀಯ ಕೃತ್ಯಗಳ ವಿರುದ್ಧ ಕಾನೂನಾತ್ಮಕ ರಕ್ಷಣೆ ದೊರಕಲಿದೆ ಎಂದರು.
ಬಸವಾದಿ ಶರಣರು ಕಾಣಬಯಸಿದ ಸಮಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, “ಇವ ನಮ್ಮವ ಇವ ನಮ್ಮವ” ಮಸೂದೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಹೊಸ ವೇಗ ನೀಡಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…