ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಮತ್ತು ಮರ್ಯಾದಾ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ-2026 ಅನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಂತರ್ಜಾತಿ ವಿವಾಹಗಳ ಮೂಲಕ ಅವರ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವವರ, ವಿಶೇಷವಾಗಿ ಯುವ ವಯಸ್ಕರ ವಿರುದ್ಧ ಮರ್ಯಾದೆಗೇಡು ಹತ್ಯೆಗಳನ್ನು ಒಳಗೊಂಡಂತೆ ಕ್ರೂರ ಸ್ವರೂಪದ ಹಿಂಸಾಚಾರಗಳು ವ್ಯಕ್ತವಾಗುತ್ತಿರುವುದು ಮುಂದುವರಿಯುತ್ತಿದ್ದು, ಕೊಲೆ, ಹಲ್ಲೆ, ಜೀವಂತ ಹೆಣ್ಣುಮಕ್ಕಳಿಗೆ ಮರಣದ ಆಚರಣೆಗಳನ್ನು (ತಿಥಿ) ಮಾಡುವುದು, ಕಾನೂನುಬದ್ಧ ಪಿತ್ರಾರ್ಜಿತ ಹಕ್ಕುಗಳನ್ನು ನಿರಾಕರಿಸುವುದು, ಸಾಮಾಜಿಕ ಬಹಿಷ್ಕಾರ, ವಿಷಪ್ರಾಶನದ ಮೂಲಕ ಅಥವಾ ಇತರ ನಿಗೂಢ ವಿಧಾನಗಳ ಮೂಲಕ ಹಾನಿಯನ್ನುಂಟು ಮಾಡುವುದು ಹೀಗೆ ಎಲ್ಲಾ ವಿಧದ ಅಮಾನವೀಯ ಕೃತ್ಯಗಳ ವಿರುದ್ಧ ಕಾನೂನಾತ್ಮಕ ರಕ್ಷಣೆ ದೊರಕಲಿದೆ ಎಂದರು.
ಬಸವಾದಿ ಶರಣರು ಕಾಣಬಯಸಿದ ಸಮಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, “ಇವ ನಮ್ಮವ ಇವ ನಮ್ಮವ” ಮಸೂದೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಹೊಸ ವೇಗ ನೀಡಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…