ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಮತ್ತು ಮರ್ಯಾದಾ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ-2026 ಅನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಂತರ್ಜಾತಿ ವಿವಾಹಗಳ ಮೂಲಕ ಅವರ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವವರ, ವಿಶೇಷವಾಗಿ ಯುವ ವಯಸ್ಕರ ವಿರುದ್ಧ ಮರ್ಯಾದೆಗೇಡು ಹತ್ಯೆಗಳನ್ನು ಒಳಗೊಂಡಂತೆ ಕ್ರೂರ ಸ್ವರೂಪದ ಹಿಂಸಾಚಾರಗಳು ವ್ಯಕ್ತವಾಗುತ್ತಿರುವುದು ಮುಂದುವರಿಯುತ್ತಿದ್ದು, ಕೊಲೆ, ಹಲ್ಲೆ, ಜೀವಂತ ಹೆಣ್ಣುಮಕ್ಕಳಿಗೆ ಮರಣದ ಆಚರಣೆಗಳನ್ನು (ತಿಥಿ) ಮಾಡುವುದು, ಕಾನೂನುಬದ್ಧ ಪಿತ್ರಾರ್ಜಿತ ಹಕ್ಕುಗಳನ್ನು ನಿರಾಕರಿಸುವುದು, ಸಾಮಾಜಿಕ ಬಹಿಷ್ಕಾರ, ವಿಷಪ್ರಾಶನದ ಮೂಲಕ ಅಥವಾ ಇತರ ನಿಗೂಢ ವಿಧಾನಗಳ ಮೂಲಕ ಹಾನಿಯನ್ನುಂಟು ಮಾಡುವುದು ಹೀಗೆ ಎಲ್ಲಾ ವಿಧದ ಅಮಾನವೀಯ ಕೃತ್ಯಗಳ ವಿರುದ್ಧ ಕಾನೂನಾತ್ಮಕ ರಕ್ಷಣೆ ದೊರಕಲಿದೆ ಎಂದರು.
ಬಸವಾದಿ ಶರಣರು ಕಾಣಬಯಸಿದ ಸಮಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, “ಇವ ನಮ್ಮವ ಇವ ನಮ್ಮವ” ಮಸೂದೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಹೊಸ ವೇಗ ನೀಡಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…