Categories: IPL 2025

ಇಶಾನ್ ಕಿಶನ್ ಅಬ್ಬರದ ಶತಕ: ರಾಯಲ್ಸ್ ವಿರುದ್ಧ ಗೆದ್ದು ಬೀಗಿದ ಸನ್ ರೈಸರ್

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಆರು ಸಿಕ್ಸರ್ ಹಾಗೂ ಹನ್ನೊಂದು ಬೌಂಡರಿಗಳ ಮೂಲಕ ಆಕರ್ಷಕ ಶತಕ ಹಾಗೂ ಟ್ರಾವಿಸ್ ಹೆಡ್ ಅವರ ಅರ್ಧಶತಕ ನೆರವಿನಿಂದ ಸನ್ ರೈಸರ್ 44 ರನ್ ಗಳ ಗೆಲುವಿನ ಕೇಕೆ ಹಾಕಿದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ರಾಜಸ್ಥಾನ ತಂಡದ ನಾಯಕ ರಿಯಾನ್ ಪರಾಗ್ ಆಯ್ಕೆ ಸರಿಯಾಗಿರಲಿಲ್ಲ, ಸನ್ ರೈಸರ್ ತಂಡದ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ (24) ಹಾಗೂ ಹೆಡ್ (67) ರನ್ ಪೇರಿಸಿ ಉತ್ತಮ ಆರಂಭ ನೀಡಿದರು.

ನಂತರ ಬಂದ ಇಶಾನ್ ಕ್ರೀಡಾಂಗಣದ ಮೂಲೆ ಮೂಲೆಗಳಿಗೆ ಸಿಕ್ಸರ್ ಹಾಗೂ ಬೌಂಡರಿ ಬಾರಿಸುವ ಮೂಲಕ ಟೂರ್ನಿಯ ಮೊದಲ ಶತಕ ದಾಖಲಿಸಿದರು, ನಂತರ ಬಂದ ನಿತೀಶ್ ಕುಮಾರ್ ರೆಡ್ಡಿ (30) ಹಾಗೂ ಕ್ಲಾಸೆನ್ (34) ರನ್ ಪೇರಿಸಿ ತಂಡದ ಮೊತ್ತವನ್ನು 286 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (1) ಹಾಗೂ ನಾಯಕ ರಿಯಾನ್ ಪರಾಗ್ (4) ಮತ್ತು ನಿತೀಶ್ ರಾಣ(11) ರನ್ ಪೇರಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಸಂಜು ಸ್ಯಾಮ್ಸನ್ (66) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜುರೇಲ್ (76) ಹೆಟ್ಮೆಯರ್ (42)ರನ್ ಗಳಿಸಿ ತಂಡವನ್ನು 242 ರನ್ ಪೇರಿಸಿದರೂ ಸಹ 44 ರನ್ ಸೋಲಿನ್ನು ಅನುಭವಿಸಿದರು.

ನಾಲ್ಕು ಓವರ್ ಗಳಲ್ಲಿ 76 ರನ್ ನೀಡಿ ಚೋಪ್ರಾ ಆಚ೯ರ್ ಅತ್ಯಂತ ದುಬಾರಿ ರನ್ ನೀಡಿ ಕಳಪೆ ದಾಖಲೆ ಅನುಭವಿಸಿದರೆ, ಶತಕ ದಾಖಲಿಸಿದ ಇಶಾನ್ ಕಿಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

  ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು.…

34 minutes ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

3 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

4 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

17 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

18 hours ago