Categories: IPL 2025

ಇಶಾನ್ ಕಿಶನ್ ಅಬ್ಬರದ ಶತಕ: ರಾಯಲ್ಸ್ ವಿರುದ್ಧ ಗೆದ್ದು ಬೀಗಿದ ಸನ್ ರೈಸರ್

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಆರು ಸಿಕ್ಸರ್ ಹಾಗೂ ಹನ್ನೊಂದು ಬೌಂಡರಿಗಳ ಮೂಲಕ ಆಕರ್ಷಕ ಶತಕ ಹಾಗೂ ಟ್ರಾವಿಸ್ ಹೆಡ್ ಅವರ ಅರ್ಧಶತಕ ನೆರವಿನಿಂದ ಸನ್ ರೈಸರ್ 44 ರನ್ ಗಳ ಗೆಲುವಿನ ಕೇಕೆ ಹಾಕಿದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ರಾಜಸ್ಥಾನ ತಂಡದ ನಾಯಕ ರಿಯಾನ್ ಪರಾಗ್ ಆಯ್ಕೆ ಸರಿಯಾಗಿರಲಿಲ್ಲ, ಸನ್ ರೈಸರ್ ತಂಡದ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ (24) ಹಾಗೂ ಹೆಡ್ (67) ರನ್ ಪೇರಿಸಿ ಉತ್ತಮ ಆರಂಭ ನೀಡಿದರು.

ನಂತರ ಬಂದ ಇಶಾನ್ ಕ್ರೀಡಾಂಗಣದ ಮೂಲೆ ಮೂಲೆಗಳಿಗೆ ಸಿಕ್ಸರ್ ಹಾಗೂ ಬೌಂಡರಿ ಬಾರಿಸುವ ಮೂಲಕ ಟೂರ್ನಿಯ ಮೊದಲ ಶತಕ ದಾಖಲಿಸಿದರು, ನಂತರ ಬಂದ ನಿತೀಶ್ ಕುಮಾರ್ ರೆಡ್ಡಿ (30) ಹಾಗೂ ಕ್ಲಾಸೆನ್ (34) ರನ್ ಪೇರಿಸಿ ತಂಡದ ಮೊತ್ತವನ್ನು 286 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (1) ಹಾಗೂ ನಾಯಕ ರಿಯಾನ್ ಪರಾಗ್ (4) ಮತ್ತು ನಿತೀಶ್ ರಾಣ(11) ರನ್ ಪೇರಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಸಂಜು ಸ್ಯಾಮ್ಸನ್ (66) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜುರೇಲ್ (76) ಹೆಟ್ಮೆಯರ್ (42)ರನ್ ಗಳಿಸಿ ತಂಡವನ್ನು 242 ರನ್ ಪೇರಿಸಿದರೂ ಸಹ 44 ರನ್ ಸೋಲಿನ್ನು ಅನುಭವಿಸಿದರು.

ನಾಲ್ಕು ಓವರ್ ಗಳಲ್ಲಿ 76 ರನ್ ನೀಡಿ ಚೋಪ್ರಾ ಆಚ೯ರ್ ಅತ್ಯಂತ ದುಬಾರಿ ರನ್ ನೀಡಿ ಕಳಪೆ ದಾಖಲೆ ಅನುಭವಿಸಿದರೆ, ಶತಕ ದಾಖಲಿಸಿದ ಇಶಾನ್ ಕಿಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

35 minutes ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

15 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

15 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

23 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago