Categories: IPL 2025

ಇಶಾನ್ ಕಿಶನ್ ಅಬ್ಬರದ ಶತಕ: ರಾಯಲ್ಸ್ ವಿರುದ್ಧ ಗೆದ್ದು ಬೀಗಿದ ಸನ್ ರೈಸರ್

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಆರು ಸಿಕ್ಸರ್ ಹಾಗೂ ಹನ್ನೊಂದು ಬೌಂಡರಿಗಳ ಮೂಲಕ ಆಕರ್ಷಕ ಶತಕ ಹಾಗೂ ಟ್ರಾವಿಸ್ ಹೆಡ್ ಅವರ ಅರ್ಧಶತಕ ನೆರವಿನಿಂದ ಸನ್ ರೈಸರ್ 44 ರನ್ ಗಳ ಗೆಲುವಿನ ಕೇಕೆ ಹಾಕಿದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ರಾಜಸ್ಥಾನ ತಂಡದ ನಾಯಕ ರಿಯಾನ್ ಪರಾಗ್ ಆಯ್ಕೆ ಸರಿಯಾಗಿರಲಿಲ್ಲ, ಸನ್ ರೈಸರ್ ತಂಡದ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ (24) ಹಾಗೂ ಹೆಡ್ (67) ರನ್ ಪೇರಿಸಿ ಉತ್ತಮ ಆರಂಭ ನೀಡಿದರು.

ನಂತರ ಬಂದ ಇಶಾನ್ ಕ್ರೀಡಾಂಗಣದ ಮೂಲೆ ಮೂಲೆಗಳಿಗೆ ಸಿಕ್ಸರ್ ಹಾಗೂ ಬೌಂಡರಿ ಬಾರಿಸುವ ಮೂಲಕ ಟೂರ್ನಿಯ ಮೊದಲ ಶತಕ ದಾಖಲಿಸಿದರು, ನಂತರ ಬಂದ ನಿತೀಶ್ ಕುಮಾರ್ ರೆಡ್ಡಿ (30) ಹಾಗೂ ಕ್ಲಾಸೆನ್ (34) ರನ್ ಪೇರಿಸಿ ತಂಡದ ಮೊತ್ತವನ್ನು 286 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (1) ಹಾಗೂ ನಾಯಕ ರಿಯಾನ್ ಪರಾಗ್ (4) ಮತ್ತು ನಿತೀಶ್ ರಾಣ(11) ರನ್ ಪೇರಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಸಂಜು ಸ್ಯಾಮ್ಸನ್ (66) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜುರೇಲ್ (76) ಹೆಟ್ಮೆಯರ್ (42)ರನ್ ಗಳಿಸಿ ತಂಡವನ್ನು 242 ರನ್ ಪೇರಿಸಿದರೂ ಸಹ 44 ರನ್ ಸೋಲಿನ್ನು ಅನುಭವಿಸಿದರು.

ನಾಲ್ಕು ಓವರ್ ಗಳಲ್ಲಿ 76 ರನ್ ನೀಡಿ ಚೋಪ್ರಾ ಆಚ೯ರ್ ಅತ್ಯಂತ ದುಬಾರಿ ರನ್ ನೀಡಿ ಕಳಪೆ ದಾಖಲೆ ಅನುಭವಿಸಿದರೆ, ಶತಕ ದಾಖಲಿಸಿದ ಇಶಾನ್ ಕಿಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago