Categories: IPL 2025

ಇಶಾನ್ ಕಿಶನ್ ಅಬ್ಬರದ ಶತಕ: ರಾಯಲ್ಸ್ ವಿರುದ್ಧ ಗೆದ್ದು ಬೀಗಿದ ಸನ್ ರೈಸರ್

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಆರು ಸಿಕ್ಸರ್ ಹಾಗೂ ಹನ್ನೊಂದು ಬೌಂಡರಿಗಳ ಮೂಲಕ ಆಕರ್ಷಕ ಶತಕ ಹಾಗೂ ಟ್ರಾವಿಸ್ ಹೆಡ್ ಅವರ ಅರ್ಧಶತಕ ನೆರವಿನಿಂದ ಸನ್ ರೈಸರ್ 44 ರನ್ ಗಳ ಗೆಲುವಿನ ಕೇಕೆ ಹಾಕಿದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ರಾಜಸ್ಥಾನ ತಂಡದ ನಾಯಕ ರಿಯಾನ್ ಪರಾಗ್ ಆಯ್ಕೆ ಸರಿಯಾಗಿರಲಿಲ್ಲ, ಸನ್ ರೈಸರ್ ತಂಡದ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ (24) ಹಾಗೂ ಹೆಡ್ (67) ರನ್ ಪೇರಿಸಿ ಉತ್ತಮ ಆರಂಭ ನೀಡಿದರು.

ನಂತರ ಬಂದ ಇಶಾನ್ ಕ್ರೀಡಾಂಗಣದ ಮೂಲೆ ಮೂಲೆಗಳಿಗೆ ಸಿಕ್ಸರ್ ಹಾಗೂ ಬೌಂಡರಿ ಬಾರಿಸುವ ಮೂಲಕ ಟೂರ್ನಿಯ ಮೊದಲ ಶತಕ ದಾಖಲಿಸಿದರು, ನಂತರ ಬಂದ ನಿತೀಶ್ ಕುಮಾರ್ ರೆಡ್ಡಿ (30) ಹಾಗೂ ಕ್ಲಾಸೆನ್ (34) ರನ್ ಪೇರಿಸಿ ತಂಡದ ಮೊತ್ತವನ್ನು 286 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (1) ಹಾಗೂ ನಾಯಕ ರಿಯಾನ್ ಪರಾಗ್ (4) ಮತ್ತು ನಿತೀಶ್ ರಾಣ(11) ರನ್ ಪೇರಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಸಂಜು ಸ್ಯಾಮ್ಸನ್ (66) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜುರೇಲ್ (76) ಹೆಟ್ಮೆಯರ್ (42)ರನ್ ಗಳಿಸಿ ತಂಡವನ್ನು 242 ರನ್ ಪೇರಿಸಿದರೂ ಸಹ 44 ರನ್ ಸೋಲಿನ್ನು ಅನುಭವಿಸಿದರು.

ನಾಲ್ಕು ಓವರ್ ಗಳಲ್ಲಿ 76 ರನ್ ನೀಡಿ ಚೋಪ್ರಾ ಆಚ೯ರ್ ಅತ್ಯಂತ ದುಬಾರಿ ರನ್ ನೀಡಿ ಕಳಪೆ ದಾಖಲೆ ಅನುಭವಿಸಿದರೆ, ಶತಕ ದಾಖಲಿಸಿದ ಇಶಾನ್ ಕಿಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

11 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

12 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

12 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

13 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

18 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

18 hours ago