Categories: IPL 2025

ಇಶಾನ್ ಕಿಶನ್ ಅಬ್ಬರದ ಶತಕ: ರಾಯಲ್ಸ್ ವಿರುದ್ಧ ಗೆದ್ದು ಬೀಗಿದ ಸನ್ ರೈಸರ್

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಆರು ಸಿಕ್ಸರ್ ಹಾಗೂ ಹನ್ನೊಂದು ಬೌಂಡರಿಗಳ ಮೂಲಕ ಆಕರ್ಷಕ ಶತಕ ಹಾಗೂ ಟ್ರಾವಿಸ್ ಹೆಡ್ ಅವರ ಅರ್ಧಶತಕ ನೆರವಿನಿಂದ ಸನ್ ರೈಸರ್ 44 ರನ್ ಗಳ ಗೆಲುವಿನ ಕೇಕೆ ಹಾಕಿದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ರಾಜಸ್ಥಾನ ತಂಡದ ನಾಯಕ ರಿಯಾನ್ ಪರಾಗ್ ಆಯ್ಕೆ ಸರಿಯಾಗಿರಲಿಲ್ಲ, ಸನ್ ರೈಸರ್ ತಂಡದ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ (24) ಹಾಗೂ ಹೆಡ್ (67) ರನ್ ಪೇರಿಸಿ ಉತ್ತಮ ಆರಂಭ ನೀಡಿದರು.

ನಂತರ ಬಂದ ಇಶಾನ್ ಕ್ರೀಡಾಂಗಣದ ಮೂಲೆ ಮೂಲೆಗಳಿಗೆ ಸಿಕ್ಸರ್ ಹಾಗೂ ಬೌಂಡರಿ ಬಾರಿಸುವ ಮೂಲಕ ಟೂರ್ನಿಯ ಮೊದಲ ಶತಕ ದಾಖಲಿಸಿದರು, ನಂತರ ಬಂದ ನಿತೀಶ್ ಕುಮಾರ್ ರೆಡ್ಡಿ (30) ಹಾಗೂ ಕ್ಲಾಸೆನ್ (34) ರನ್ ಪೇರಿಸಿ ತಂಡದ ಮೊತ್ತವನ್ನು 286 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (1) ಹಾಗೂ ನಾಯಕ ರಿಯಾನ್ ಪರಾಗ್ (4) ಮತ್ತು ನಿತೀಶ್ ರಾಣ(11) ರನ್ ಪೇರಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಸಂಜು ಸ್ಯಾಮ್ಸನ್ (66) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜುರೇಲ್ (76) ಹೆಟ್ಮೆಯರ್ (42)ರನ್ ಗಳಿಸಿ ತಂಡವನ್ನು 242 ರನ್ ಪೇರಿಸಿದರೂ ಸಹ 44 ರನ್ ಸೋಲಿನ್ನು ಅನುಭವಿಸಿದರು.

ನಾಲ್ಕು ಓವರ್ ಗಳಲ್ಲಿ 76 ರನ್ ನೀಡಿ ಚೋಪ್ರಾ ಆಚ೯ರ್ ಅತ್ಯಂತ ದುಬಾರಿ ರನ್ ನೀಡಿ ಕಳಪೆ ದಾಖಲೆ ಅನುಭವಿಸಿದರೆ, ಶತಕ ದಾಖಲಿಸಿದ ಇಶಾನ್ ಕಿಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago