Categories: IPL 2025

ಇಶಾನ್ ಕಿಶನ್ ಅಬ್ಬರದ ಶತಕ: ರಾಯಲ್ಸ್ ವಿರುದ್ಧ ಗೆದ್ದು ಬೀಗಿದ ಸನ್ ರೈಸರ್

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಆರು ಸಿಕ್ಸರ್ ಹಾಗೂ ಹನ್ನೊಂದು ಬೌಂಡರಿಗಳ ಮೂಲಕ ಆಕರ್ಷಕ ಶತಕ ಹಾಗೂ ಟ್ರಾವಿಸ್ ಹೆಡ್ ಅವರ ಅರ್ಧಶತಕ ನೆರವಿನಿಂದ ಸನ್ ರೈಸರ್ 44 ರನ್ ಗಳ ಗೆಲುವಿನ ಕೇಕೆ ಹಾಕಿದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ರಾಜಸ್ಥಾನ ತಂಡದ ನಾಯಕ ರಿಯಾನ್ ಪರಾಗ್ ಆಯ್ಕೆ ಸರಿಯಾಗಿರಲಿಲ್ಲ, ಸನ್ ರೈಸರ್ ತಂಡದ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ (24) ಹಾಗೂ ಹೆಡ್ (67) ರನ್ ಪೇರಿಸಿ ಉತ್ತಮ ಆರಂಭ ನೀಡಿದರು.

ನಂತರ ಬಂದ ಇಶಾನ್ ಕ್ರೀಡಾಂಗಣದ ಮೂಲೆ ಮೂಲೆಗಳಿಗೆ ಸಿಕ್ಸರ್ ಹಾಗೂ ಬೌಂಡರಿ ಬಾರಿಸುವ ಮೂಲಕ ಟೂರ್ನಿಯ ಮೊದಲ ಶತಕ ದಾಖಲಿಸಿದರು, ನಂತರ ಬಂದ ನಿತೀಶ್ ಕುಮಾರ್ ರೆಡ್ಡಿ (30) ಹಾಗೂ ಕ್ಲಾಸೆನ್ (34) ರನ್ ಪೇರಿಸಿ ತಂಡದ ಮೊತ್ತವನ್ನು 286 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (1) ಹಾಗೂ ನಾಯಕ ರಿಯಾನ್ ಪರಾಗ್ (4) ಮತ್ತು ನಿತೀಶ್ ರಾಣ(11) ರನ್ ಪೇರಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಸಂಜು ಸ್ಯಾಮ್ಸನ್ (66) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜುರೇಲ್ (76) ಹೆಟ್ಮೆಯರ್ (42)ರನ್ ಗಳಿಸಿ ತಂಡವನ್ನು 242 ರನ್ ಪೇರಿಸಿದರೂ ಸಹ 44 ರನ್ ಸೋಲಿನ್ನು ಅನುಭವಿಸಿದರು.

ನಾಲ್ಕು ಓವರ್ ಗಳಲ್ಲಿ 76 ರನ್ ನೀಡಿ ಚೋಪ್ರಾ ಆಚ೯ರ್ ಅತ್ಯಂತ ದುಬಾರಿ ರನ್ ನೀಡಿ ಕಳಪೆ ದಾಖಲೆ ಅನುಭವಿಸಿದರೆ, ಶತಕ ದಾಖಲಿಸಿದ ಇಶಾನ್ ಕಿಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

8 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

8 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

9 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

10 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

13 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

13 hours ago