ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದ್ದು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕ ಗಿಟಾರ್ ಬಾರಿಸುತ್ತ ಕುಳಿತಿದ್ದ ಐವರು ಪ್ರವಾಸಿಗರ ಪೈಕಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ರೇಲ್ನ 27 ವರ್ಷದ ಪ್ರವಾಸಿ ಮಹಿಳೆ ಮತ್ತು 29 ವರ್ಷದ ಸ್ಥಳೀಯ ಹೋಮ್ ಸ್ಟೇ ಒಡತಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನುಳಿದ ಮೂವರು ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅದರಲ್ಲಿ ಒಡಿಶಾದ ಪ್ರವಾಸಿಗನನ್ನು ಕಾಲುವೆಗೆ ಎಸೆಯಲಾಗಿದ್ದು, ಆತನ ಪತ್ತೆಗಾಗಿ ಶೋಧ ಮುಂದುವರಿದಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…