ಇಸ್ರೋ ಕಚೇರಿ ತಲುಪಿದ ಪ್ರಧಾನಿ ಮೋದಿ: ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಕೆ

ಬೆಂಗಳೂರಿನ ಇಸ್ರೋ ಕೇಂದ್ರ ತಲುಪಿದ ಪ್ರಧಾನಿ ಮೋದಿ, ಮೋದಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಇಸ್ರೋ ವಿಜ್ಞಾನಿಗಳು. ಇಸ್ರೋ ಅಧ್ಯಕ್ಷ ಸೋಮನಾಥ್‌ ಮತ್ತು ವಿಜ್ಞಾನಿಗಳ ಬೆನ್ನು ತಟ್ಟಿ ಅಭಿನಂದಿಸಿದ ಮೋದಿ.

ಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆ ವಿದೇಶಿ ಪ್ರವಾಸ ಮುಗಿಸಿ ನೇರವಾಗಿ ಇಸ್ರೋಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ.

ಇಸ್ರೋ ಮುಖ್ಯಸ್ಥ ಸೋಮನಾಥ್​ರಿಂದ ವಿಕ್ರಮ್ ಲ್ಯಾಂಡರ್ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಣೆ, ಪ್ರಧಾನಿ ಮೋದಿಗೆ ವಿಕ್ರಂ ಲ್ಯಾಂಡರ್‌ ಮಾದರಿ, ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದ ಫೋಟೋವನ್ನು ಮೋದಿ ಅವರಿಗೆ ಉಡುಗೊರೆಯಾಗಿ ನೀಡಲಾಯಿತು.

ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ.

ಆಗಸ್ಟ್ 23ರಂದು ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಆದ ಹಿನ್ನೆಲೆ ಆ ದಿನವನ್ನು ಪ್ರತಿವರ್ಷ ರಾಷ್ಟ್ರೀಯ ಬಾಹ್ಯಾಕಾಶ ದಿನ (National Space Day) ಎಂದು ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

ಯಾವುದೇ ಕೆಲಸವನ್ನು ಯಶಸ್ವಿಯಾಗಿ ಮಾಡಲು ನಮಗೆ ಶಕ್ತಿಯ ಆಶೀರ್ವಾದ ಬೇಕು ಮತ್ತು ನಮ್ಮ ಆ ಶಕ್ತಿಯೇ ನಮ್ಮ ‘ನಾರಿ ಶಕ್ತಿ.’ ಚಂದ್ರಯಾನ-3 ಮಿಷನ್‌ನಲ್ಲಿ ನಮ್ಮ ಮಹಿಳಾ ವಿಜ್ಞಾನಿಗಳು ಪ್ರಮುಖ ಪಾತ್ರ ವಹಿಸಿರುವುದನ್ನು ನೀವೆಲ್ಲರೂ ನೋಡಿದ್ದೀರಿ. ಈ ಶಿವಶಕ್ತಿ ಅಂಶವು ಮುಂದಿನ ಪೀಳಿಗೆಯನ್ನು ಮಾನವೀಯತೆಯ ಕಲ್ಯಾಣಕ್ಕಾಗಿ ಪ್ರೇರೇಪಿಸುತ್ತದೆ ಆದ ಕಾರಣ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ‘ ಎಂದು ಹೆಸರಿಡೋಣ ಎಂದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

7 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

7 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

15 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago