ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಇ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದು, ಕೆಲಸವನ್ನು ಮಾಡಿಕೊಡಲು ಶಿವಕೋಟೆ ಗ್ರಾಮ ಪಂಚಾಯ್ತಿಯ ಬಿಲ್ ಕಲಕ್ಟರ್ ಆದ ಪ್ರದೀಪ್ ರವರು 13,000 ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದ ಸಮೇತ ಬಿಲ್ ಕಲಕ್ಟರ್ ಪ್ರದೀಪ್ ರವರನ್ನು ಬಂಧಿಸಿ ತನಿಖೆ ಕೈಗೊಂಡಿರುತ್ತಾರೆ.
ಈ ಟ್ರ್ಯಾಪ್ ಪ್ರಕ್ರಿಯೆಯನ್ನು ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕರಾದ ಪವನ್ ನೆಟ್ಟೂರು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಮತ್ತು ಸಿಬ್ಬಂದಿ ವರ್ಗದವರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ, ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…
ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…
ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…
ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…