ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಇ-ಶ್ರಮ್ ಪೋರ್ಟಲ್ನ್ನು ಅಭಿವೃದ್ಧಿಪಡಿಸಿದ್ದು, ಸುಮಾರು 379 ವರ್ಗಗಳ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಪೋರ್ಟಲ್ ಮೂಲಕ ಉಚಿತವಾಗಿ ನೋಂದಾಯಿಸಲಾಗುತ್ತಿದ್ದು, ಗುರುತಿನ ಚೀಟಿಯನ್ನು ನೋಂದಾಯಿತ ಸ್ಥಳದಲ್ಲಿ ವಿತರಿಸಲಾಗುತ್ತಿದೆ.
ಅದರಂತೆ ಕೈಮಗ್ಗ ಮತ್ತು ವಿದ್ಯುತ್ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಿ. ಜಿಲ್ಲೆಯಲ್ಲಿ ಕೈಮಗ್ಗ ಮತ್ತು ವಿದ್ಯುತ್ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಸ್ಥಳಿಯ ಗ್ರಾಮ-ಒನ್, ಕರ್ನಾಟಕ-ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಹಾಗೂ ಇತರೆ ಸರ್ಕಾರದ ಸೇವಾ ಕೇಂದ್ರಗಳಲ್ಲಿ ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸರ್ಕಾರದ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ/ ತಾಲ್ಲೂಕಿನ ಸಂಘಟಿತ ಹಾಗೂ ಅಸಂಘಟಿತ ನೇಕಾರರು ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಲು ಕೋರಿದೆ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕಚೇರಿಯ ಸಮಯದಲ್ಲಿ ಖುದ್ದು ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…