ಇ-ಶ್ರಮ್ ಪೋರ್ಟಲ್‌ನಲ್ಲಿ ಸಂಘಟಿತ/ ಅಸಂಘಟಿತ ನೇಕಾರರು ನೋಂದಾಯಿಸಲು ಅವಕಾಶ

ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಇ-ಶ್ರಮ್ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಿದ್ದು, ಸುಮಾರು 379 ವರ್ಗಗಳ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಪೋರ್ಟಲ್ ಮೂಲಕ ಉಚಿತವಾಗಿ ನೋಂದಾಯಿಸಲಾಗುತ್ತಿದ್ದು, ಗುರುತಿನ ಚೀಟಿಯನ್ನು ನೋಂದಾಯಿತ ಸ್ಥಳದಲ್ಲಿ ವಿತರಿಸಲಾಗುತ್ತಿದೆ.

ಅದರಂತೆ ಕೈಮಗ್ಗ ಮತ್ತು ವಿದ್ಯುತ್‌ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಿ. ಜಿಲ್ಲೆಯಲ್ಲಿ ಕೈಮಗ್ಗ ಮತ್ತು ವಿದ್ಯುತ್‌ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಸ್ಥಳಿಯ ಗ್ರಾಮ-ಒನ್, ಕರ್ನಾಟಕ-ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಹಾಗೂ ಇತರೆ ಸರ್ಕಾರದ ಸೇವಾ ಕೇಂದ್ರಗಳಲ್ಲಿ ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸರ್ಕಾರದ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ/ ತಾಲ್ಲೂಕಿನ ಸಂಘಟಿತ ಹಾಗೂ ಅಸಂಘಟಿತ ನೇಕಾರರು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಕೋರಿದೆ.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕಚೇರಿಯ ಸಮಯದಲ್ಲಿ ಖುದ್ದು ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ‌‌ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

5 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago