ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಇ-ಶ್ರಮ್ ಪೋರ್ಟಲ್ನ್ನು ಅಭಿವೃದ್ಧಿಪಡಿಸಿದ್ದು, ಸುಮಾರು 379 ವರ್ಗಗಳ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಪೋರ್ಟಲ್ ಮೂಲಕ ಉಚಿತವಾಗಿ ನೋಂದಾಯಿಸಲಾಗುತ್ತಿದ್ದು, ಗುರುತಿನ ಚೀಟಿಯನ್ನು ನೋಂದಾಯಿತ ಸ್ಥಳದಲ್ಲಿ ವಿತರಿಸಲಾಗುತ್ತಿದೆ.
ಅದರಂತೆ ಕೈಮಗ್ಗ ಮತ್ತು ವಿದ್ಯುತ್ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಿ. ಜಿಲ್ಲೆಯಲ್ಲಿ ಕೈಮಗ್ಗ ಮತ್ತು ವಿದ್ಯುತ್ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಸ್ಥಳಿಯ ಗ್ರಾಮ-ಒನ್, ಕರ್ನಾಟಕ-ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಹಾಗೂ ಇತರೆ ಸರ್ಕಾರದ ಸೇವಾ ಕೇಂದ್ರಗಳಲ್ಲಿ ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸರ್ಕಾರದ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ/ ತಾಲ್ಲೂಕಿನ ಸಂಘಟಿತ ಹಾಗೂ ಅಸಂಘಟಿತ ನೇಕಾರರು ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಲು ಕೋರಿದೆ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕಚೇರಿಯ ಸಮಯದಲ್ಲಿ ಖುದ್ದು ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…