ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇನ್ನು ಮುಂದೆ ನಾಗರಿಕರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕವೂ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಒಪ್ಪಂದವು 3 ವರ್ಷಗಳ ಅವಧಿಗೆ ಚಾಲ್ತಿಯಲ್ಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು ವ್ಯವಸ್ಥೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಸೇವೆ ಇನ್ನು ಮುಂದೆ ರಾಜ್ಯದಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಕೇಂದ್ರಗಳ ನಿರ್ವಾಹಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ಇ-ಸ್ವತ್ತು ವ್ಯವಸ್ಥೆಯ ಬಗ್ಗೆ ಅಗತ್ಯ ತರಬೇತಿ ನೀಡಲಾಗುವುದು ಹಾಗೂ ನಿರ್ವಾಹಕರಿಗೆ ಪ್ರತ್ಯೇಕ ಲಾಗಿನ್ ಖಾತೆಗಳನ್ನು ಇಲಾಖೆ ರಚಿಸಿಕೊಡಲಾಗುವುದು. ಸೇವೆಗಳ ಸಮನ್ವಯಕ್ಕಾಗಿ ಇಲಾಖೆ ವತಿಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದಿದ್ದಾರೆ.

ಹೊಸ ಖಾತಾ ಸೇವೆಗೆ 45 ರೂ. ಶುಲ್ಕ ನಿಗದಿಪಡಿಸಿದ್ದು ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು. ಇ-ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್‌ಲೋಡ್ ಮಾಡಲು ಪ್ರತಿ ಪುಟಕ್ಕೆ 5 ರೂ. ಪಾವತಿಸಬೇಕಾಗುವುದು. ಎಲ್ಲ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ, ಕಾರ್ಮಿಕರ ದಿನ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಮತ್ತು ಮತದಾನದ ದಿನಗಳಂದು ಈ ಕೇಂದ್ರಗಳಿಗೆ ರಜೆ ಇರುತ್ತದೆ ಎಂದು ತಿಳಿಸಿದ್ದಾರೆ ‌

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

16 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago