ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇನ್ನು ಮುಂದೆ ನಾಗರಿಕರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕವೂ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಒಪ್ಪಂದವು 3 ವರ್ಷಗಳ ಅವಧಿಗೆ ಚಾಲ್ತಿಯಲ್ಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು ವ್ಯವಸ್ಥೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಸೇವೆ ಇನ್ನು ಮುಂದೆ ರಾಜ್ಯದಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಕೇಂದ್ರಗಳ ನಿರ್ವಾಹಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ವ್ಯವಸ್ಥೆಯ ಬಗ್ಗೆ ಅಗತ್ಯ ತರಬೇತಿ ನೀಡಲಾಗುವುದು ಹಾಗೂ ನಿರ್ವಾಹಕರಿಗೆ ಪ್ರತ್ಯೇಕ ಲಾಗಿನ್ ಖಾತೆಗಳನ್ನು ಇಲಾಖೆ ರಚಿಸಿಕೊಡಲಾಗುವುದು. ಸೇವೆಗಳ ಸಮನ್ವಯಕ್ಕಾಗಿ ಇಲಾಖೆ ವತಿಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದಿದ್ದಾರೆ.
ಹೊಸ ಖಾತಾ ಸೇವೆಗೆ 45 ರೂ. ಶುಲ್ಕ ನಿಗದಿಪಡಿಸಿದ್ದು ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು. ಇ-ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್ಲೋಡ್ ಮಾಡಲು ಪ್ರತಿ ಪುಟಕ್ಕೆ 5 ರೂ. ಪಾವತಿಸಬೇಕಾಗುವುದು. ಎಲ್ಲ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ, ಕಾರ್ಮಿಕರ ದಿನ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಮತ್ತು ಮತದಾನದ ದಿನಗಳಂದು ಈ ಕೇಂದ್ರಗಳಿಗೆ ರಜೆ ಇರುತ್ತದೆ ಎಂದು ತಿಳಿಸಿದ್ದಾರೆ
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…