ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇನ್ನು ಮುಂದೆ ನಾಗರಿಕರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕವೂ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಒಪ್ಪಂದವು 3 ವರ್ಷಗಳ ಅವಧಿಗೆ ಚಾಲ್ತಿಯಲ್ಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು ವ್ಯವಸ್ಥೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಸೇವೆ ಇನ್ನು ಮುಂದೆ ರಾಜ್ಯದಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಕೇಂದ್ರಗಳ ನಿರ್ವಾಹಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ವ್ಯವಸ್ಥೆಯ ಬಗ್ಗೆ ಅಗತ್ಯ ತರಬೇತಿ ನೀಡಲಾಗುವುದು ಹಾಗೂ ನಿರ್ವಾಹಕರಿಗೆ ಪ್ರತ್ಯೇಕ ಲಾಗಿನ್ ಖಾತೆಗಳನ್ನು ಇಲಾಖೆ ರಚಿಸಿಕೊಡಲಾಗುವುದು. ಸೇವೆಗಳ ಸಮನ್ವಯಕ್ಕಾಗಿ ಇಲಾಖೆ ವತಿಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದಿದ್ದಾರೆ.
ಹೊಸ ಖಾತಾ ಸೇವೆಗೆ 45 ರೂ. ಶುಲ್ಕ ನಿಗದಿಪಡಿಸಿದ್ದು ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು. ಇ-ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್ಲೋಡ್ ಮಾಡಲು ಪ್ರತಿ ಪುಟಕ್ಕೆ 5 ರೂ. ಪಾವತಿಸಬೇಕಾಗುವುದು. ಎಲ್ಲ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ, ಕಾರ್ಮಿಕರ ದಿನ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಮತ್ತು ಮತದಾನದ ದಿನಗಳಂದು ಈ ಕೇಂದ್ರಗಳಿಗೆ ರಜೆ ಇರುತ್ತದೆ ಎಂದು ತಿಳಿಸಿದ್ದಾರೆ
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…