ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ ಇ ಸ್ವತ್ತು ನೀಡಲು ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಾನಂದ ಮರಿಕೇರಿ ಲಂಚ ಪಡೆದ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ.
ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು ಎಂದು ಕ್ಷಮೆ ಕೇಳಿರುವ ವಿಡಿಯೋ ಫುಲ್ ವೈರಲ್ ಆಗಿದೆ.
ವರ್ಗಾವಣೆ ಆಗಿದ್ದೇನೆ ಕೂಡಲೇ ಇ ಸ್ವತ್ತು ತೆಗೆದುಕೊಂಡು ಹೋಗಿ ಎಂದು ಹಣಕ್ಕೆ ಬೇಡಿಕೆ ಇಟ್ಟು, 10 ಸಾವಿರ ಹಣವನ್ನ ಸ್ನೇಹಿತನಿಗೆ ಫೋನ್ ಪೇ ಮಾಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಸಾಕ್ಷಿ ಸಮೇತ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪಿಡಿಒ ಅವರಿಗೆ ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪಿಡಿಒ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ಈ ಹಿಂದೆಯೂ ಕೂಡ ಪಿಡಿಒ ವಿರುದ್ಧ ಸಾಕಷ್ಟು ಲಂಚದ ಆರೋಪಗಳು ಕೇಳಿಬಂದಿದ್ದವು. ಈ ಕುರಿತು ಶಾಸಕ ಧೀರಜ್ ಮುನಿರಾಜ್ ಅವರ ಗಮನಕ್ಕೆ ಬಂದಿತ್ತು. ಶಾಸಕರು ಈ ಪಿಡಿಒ ಅವರಿಗೆ ವಾರ್ನ್ ಕೂಡ ಮಾಡಿದ್ದರು. ಇಷ್ಟಾದರೂ ಬುದ್ಧಿ ಕಲಿಯದ ಈ ಪಿಡಿಒ ಮತ್ತೆ ಲಂಚದ ಹುತ್ತಕ್ಕೆ ಕೈಹಾಕುತ್ತಲೇ ಬಂದಿದ್ದಾರೆ. ಇಷ್ಟೆಲ್ಲಾ ಆರೋಪಗಳು ಈ ಪಿಡಿಒ ಅವರ ಮೇಲೆ ಇದ್ದರೂ ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ತಾ.ಪಂ ಇಒ ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಖೇದಕರ ವಿಷಯ ಎಂದು ಸ್ಥಳೀಯರು ಆರೋಪಿಸಿದ್ದಾರೆ…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…