ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ ಇ ಸ್ವತ್ತು ನೀಡಲು ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಾನಂದ ಮರಿಕೇರಿ ಲಂಚ ಪಡೆದ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ.
ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು ಎಂದು ಕ್ಷಮೆ ಕೇಳಿರುವ ವಿಡಿಯೋ ಫುಲ್ ವೈರಲ್ ಆಗಿದೆ.
ವರ್ಗಾವಣೆ ಆಗಿದ್ದೇನೆ ಕೂಡಲೇ ಇ ಸ್ವತ್ತು ತೆಗೆದುಕೊಂಡು ಹೋಗಿ ಎಂದು ಹಣಕ್ಕೆ ಬೇಡಿಕೆ ಇಟ್ಟು, 10 ಸಾವಿರ ಹಣವನ್ನ ಸ್ನೇಹಿತನಿಗೆ ಫೋನ್ ಪೇ ಮಾಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಸಾಕ್ಷಿ ಸಮೇತ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪಿಡಿಒ ಅವರಿಗೆ ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪಿಡಿಒ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ಈ ಹಿಂದೆಯೂ ಕೂಡ ಪಿಡಿಒ ವಿರುದ್ಧ ಸಾಕಷ್ಟು ಲಂಚದ ಆರೋಪಗಳು ಕೇಳಿಬಂದಿದ್ದವು. ಈ ಕುರಿತು ಶಾಸಕ ಧೀರಜ್ ಮುನಿರಾಜ್ ಅವರ ಗಮನಕ್ಕೆ ಬಂದಿತ್ತು. ಶಾಸಕರು ಈ ಪಿಡಿಒ ಅವರಿಗೆ ವಾರ್ನ್ ಕೂಡ ಮಾಡಿದ್ದರು. ಇಷ್ಟಾದರೂ ಬುದ್ಧಿ ಕಲಿಯದ ಈ ಪಿಡಿಒ ಮತ್ತೆ ಲಂಚದ ಹುತ್ತಕ್ಕೆ ಕೈಹಾಕುತ್ತಲೇ ಬಂದಿದ್ದಾರೆ. ಇಷ್ಟೆಲ್ಲಾ ಆರೋಪಗಳು ಈ ಪಿಡಿಒ ಅವರ ಮೇಲೆ ಇದ್ದರೂ ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ತಾ.ಪಂ ಇಒ ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಖೇದಕರ ವಿಷಯ ಎಂದು ಸ್ಥಳೀಯರು ಆರೋಪಿಸಿದ್ದಾರೆ…
ಮಿತ್ರತ್ವ ಅಥವಾ ಸಹಜತೆಗೆ ದ್ರೋಹ....... ಒಂದು ಸಲಹೆ ಮತ್ತು ಮನವಿ..... ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ…
ದೊಡ್ಡಬಳ್ಳಾಪುರ: ಲೀಸ್ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…