ಇ ಖಾತೆ ನೀಡಲು ಲಂಚ ಪಡೆದ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ: ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು ಎಂದು ಕ್ಷಮೆ ಕೇಳಿರುವ ವಿಡಿಯೋ ವೈರಲ್

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ ಇ ಸ್ವತ್ತು ನೀಡಲು ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಾನಂದ ಮರಿಕೇರಿ ಲಂಚ ಪಡೆದ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ.

ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು ಎಂದು ಕ್ಷಮೆ ಕೇಳಿರುವ ವಿಡಿಯೋ ಫುಲ್ ವೈರಲ್ ಆಗಿದೆ.

ವರ್ಗಾವಣೆ ಆಗಿದ್ದೇನೆ ಕೂಡಲೇ ಇ ಸ್ವತ್ತು ತೆಗೆದುಕೊಂಡು ಹೋಗಿ ಎಂದು ಹಣಕ್ಕೆ ಬೇಡಿಕೆ ಇಟ್ಟು, 10 ಸಾವಿರ ಹಣವನ್ನ ಸ್ನೇಹಿತನಿಗೆ ಫೋನ್ ಪೇ ಮಾಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಸಾಕ್ಷಿ ಸಮೇತ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪಿಡಿಒ ಅವರಿಗೆ ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪಿಡಿಒ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಈ ಹಿಂದೆಯೂ ಕೂಡ ಪಿಡಿಒ ವಿರುದ್ಧ ಸಾಕಷ್ಟು ಲಂಚದ ಆರೋಪಗಳು ಕೇಳಿಬಂದಿದ್ದವು. ಈ ಕುರಿತು ಶಾಸಕ ಧೀರಜ್ ಮುನಿರಾಜ್ ಅವರ ಗಮನಕ್ಕೆ ಬಂದಿತ್ತು. ಶಾಸಕರು ಈ ಪಿಡಿಒ ಅವರಿಗೆ ವಾರ್ನ್ ಕೂಡ ಮಾಡಿದ್ದರು. ಇಷ್ಟಾದರೂ ಬುದ್ಧಿ ಕಲಿಯದ ಈ ಪಿಡಿಒ ಮತ್ತೆ ಲಂಚದ ಹುತ್ತಕ್ಕೆ ಕೈಹಾಕುತ್ತಲೇ ಬಂದಿದ್ದಾರೆ. ಇಷ್ಟೆಲ್ಲಾ ಆರೋಪಗಳು ಈ ಪಿಡಿಒ ಅವರ ಮೇಲೆ ಇದ್ದರೂ ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ತಾ.ಪಂ ಇಒ ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಖೇದಕರ ವಿಷಯ ಎಂದು ಸ್ಥಳೀಯರು ಆರೋಪಿಸಿದ್ದಾರೆ…

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

18 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

24 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago