‘ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ’-ಕೆ.ವೆಂಕಟೇಶ್

ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ ಬಳಗದ ವತಿಯಿಂದ ಹಿರಿಯ ಪತ್ರಕರ್ತ ಸಂಪತ್ ಅಯ್ಯಂಗಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಎಂಬುದು ಇಂದು ಅಂಗಡಿಯಲ್ಲಿ ವ್ಯಾಪಾರ ಮಾಡುವ ಸರಕಾಗಿದೆ.

ಮತದಾನ ಎಂಬುದು ಹಣಕೊಟ್ಟು ಕೊಂಡುಕೊಳ್ಳುವ ವಸ್ತುವಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಸಂಪತ್ ಅಯ್ಯಂಗಾರ್ ಅವರು ಐದು ಬಾರಿ ಪುರಸಭೆಯ ಸದಸ್ಯರು ಮತ್ತು ಒಂದು ಬಾರಿ ನಗರಸಭೆ ಉಪಾಧ್ಯಕ್ಷರಾಗಿದ್ದವರು, ಎಂದೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿದವರಲ್ಲ, ಜನಪರವಾಗಿದ್ದ ಅವರು ನೂರಾರು ಶವಗಳ ಸಂಸ್ಕಾರ ಮಾಡಿದ್ದರು, ದೀನ ದಲಿತರ ಪರ ನಿರಂತರ ಕಾಳಜಿ ಇದ್ದ ಅವರು ಹಲವಾರು ದಲಿತ ಯುವಕರ ಬೌದ್ಧಿಕ ಮತ್ತು ಆರ್ಥಿಕವಾಗಿ ಬೆಳೆಸಿದ್ದರು ಎಂದರು.

ಎಂ.ಎಸ್.ಸಂಪತ್ ಅಯ್ಯಂಗಾರ್ ಇನ್ನಿಲ್ಲ ಎಂದಾಗ ನಮ್ಮೊಳಗಿನ ಚೈತನ್ಯ, ಬೆಳಕು ಉತ್ಸಾಹ ಕುಂದಿತು ಎಂದು ಹೇಳುವವರಿಗೆ ಲೆಕ್ಕವಿಲ್ಲ. ಜನರಿಗೆ ಗುರು, ಗೆಳೆಯ, ಮಾರ್ಗದರ್ಶಿಯಂತಿದ್ದ ಅವರು ಒಡನಾಡಿಗಳ ಪಾಲಿಗೆ ಅಕ್ಷಯ ನಿಧಿಯಂತಿದ್ದರು, ಸಮಾಜ ಕಾಯಕ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ, ಅನುವಾದ, ಬೋಧನೆಯನ್ನು ಅವರು ಶ್ರದ್ಧೆ ಇರುವವರಿಗೆಲ್ಲಾ ಧಾರೆ ಎರೆದವರು ಎಂದರು.

ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್ ಅವರು ಮಾತನಾಡಿ ಸಂಪತ್ ಅಯ್ಯಂಗಾರ್ ಅವರು ಆತ್ಮವಿಶ್ವಾಸದ ಪ್ರತೀಕದಂತಿದ್ದರು, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಒಂದು ವರ್ಷಗಳ ಕಾಲ ಯಾವುದೇ ಸಂಭಾವನೆ ಪಡೆಯದೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.

ಬಹುಮುಖ ಪ್ರತಿಭೆಯ ಸಂಪತ್ ಅಯ್ಯಂಗಾರ್ ಅವರು ಸಂಗೀತ ಪ್ರೇಮಿಯಾಗಿದ್ದರು, ದೊಡ್ಡಬಳ್ಳಾಪುರದಲ್ಲಿ ಸಂಗೀತ ಅಭಿಮಾನಿಗಳ ಒಗ್ಗೂಡಿಸಿ ಸುಸ್ವರ ಎಂಬ ತಂಡವನ್ನು ಕಟ್ಟಿ ರಾಷ್ಟ್ರೀಯ ಮಟ್ಟದ ಸಂಗೀತ ವಿದೂಷಿಗಳನ್ನು ಕರೆಸಿ ಸಂಗೀತ ಕಚೇರಿಗಳನ್ನು ನಡೆಸುತ್ತಿದ್ದರು.

ಸಂಗೀತದ ಬರಹ ಸೇರಿದಂತೆ ಹಲವಾರು ವಿಚಾರಗಳ ಮೇಲೆ ಪಾಂಡಿತ್ಯ ಹೊಂದಿದ್ದ ಅವರ ಕೆಲವು ಪುಸ್ತಕಗಳು ಆಂಗ್ಲ ಭಾಷೆಗೆ ಅನುವಾದಗೊಂಡಿದ್ದು, ದೊಡ್ಡಬಳ್ಳಾಪುರದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರು ಎಂದರು.

ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎ.ಓ.ಆವಲಮೂರ್ತಿ, ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ, ತ.ನ.ಪ್ರಭುದೇವ್, ವಕೀಲರಾದ ಆರೂಡಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

4 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

4 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

6 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

14 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

23 hours ago