‘ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ’-ಕೆ.ವೆಂಕಟೇಶ್

ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ ಬಳಗದ ವತಿಯಿಂದ ಹಿರಿಯ ಪತ್ರಕರ್ತ ಸಂಪತ್ ಅಯ್ಯಂಗಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಎಂಬುದು ಇಂದು ಅಂಗಡಿಯಲ್ಲಿ ವ್ಯಾಪಾರ ಮಾಡುವ ಸರಕಾಗಿದೆ.

ಮತದಾನ ಎಂಬುದು ಹಣಕೊಟ್ಟು ಕೊಂಡುಕೊಳ್ಳುವ ವಸ್ತುವಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಸಂಪತ್ ಅಯ್ಯಂಗಾರ್ ಅವರು ಐದು ಬಾರಿ ಪುರಸಭೆಯ ಸದಸ್ಯರು ಮತ್ತು ಒಂದು ಬಾರಿ ನಗರಸಭೆ ಉಪಾಧ್ಯಕ್ಷರಾಗಿದ್ದವರು, ಎಂದೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿದವರಲ್ಲ, ಜನಪರವಾಗಿದ್ದ ಅವರು ನೂರಾರು ಶವಗಳ ಸಂಸ್ಕಾರ ಮಾಡಿದ್ದರು, ದೀನ ದಲಿತರ ಪರ ನಿರಂತರ ಕಾಳಜಿ ಇದ್ದ ಅವರು ಹಲವಾರು ದಲಿತ ಯುವಕರ ಬೌದ್ಧಿಕ ಮತ್ತು ಆರ್ಥಿಕವಾಗಿ ಬೆಳೆಸಿದ್ದರು ಎಂದರು.

ಎಂ.ಎಸ್.ಸಂಪತ್ ಅಯ್ಯಂಗಾರ್ ಇನ್ನಿಲ್ಲ ಎಂದಾಗ ನಮ್ಮೊಳಗಿನ ಚೈತನ್ಯ, ಬೆಳಕು ಉತ್ಸಾಹ ಕುಂದಿತು ಎಂದು ಹೇಳುವವರಿಗೆ ಲೆಕ್ಕವಿಲ್ಲ. ಜನರಿಗೆ ಗುರು, ಗೆಳೆಯ, ಮಾರ್ಗದರ್ಶಿಯಂತಿದ್ದ ಅವರು ಒಡನಾಡಿಗಳ ಪಾಲಿಗೆ ಅಕ್ಷಯ ನಿಧಿಯಂತಿದ್ದರು, ಸಮಾಜ ಕಾಯಕ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ, ಅನುವಾದ, ಬೋಧನೆಯನ್ನು ಅವರು ಶ್ರದ್ಧೆ ಇರುವವರಿಗೆಲ್ಲಾ ಧಾರೆ ಎರೆದವರು ಎಂದರು.

ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್ ಅವರು ಮಾತನಾಡಿ ಸಂಪತ್ ಅಯ್ಯಂಗಾರ್ ಅವರು ಆತ್ಮವಿಶ್ವಾಸದ ಪ್ರತೀಕದಂತಿದ್ದರು, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಒಂದು ವರ್ಷಗಳ ಕಾಲ ಯಾವುದೇ ಸಂಭಾವನೆ ಪಡೆಯದೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.

ಬಹುಮುಖ ಪ್ರತಿಭೆಯ ಸಂಪತ್ ಅಯ್ಯಂಗಾರ್ ಅವರು ಸಂಗೀತ ಪ್ರೇಮಿಯಾಗಿದ್ದರು, ದೊಡ್ಡಬಳ್ಳಾಪುರದಲ್ಲಿ ಸಂಗೀತ ಅಭಿಮಾನಿಗಳ ಒಗ್ಗೂಡಿಸಿ ಸುಸ್ವರ ಎಂಬ ತಂಡವನ್ನು ಕಟ್ಟಿ ರಾಷ್ಟ್ರೀಯ ಮಟ್ಟದ ಸಂಗೀತ ವಿದೂಷಿಗಳನ್ನು ಕರೆಸಿ ಸಂಗೀತ ಕಚೇರಿಗಳನ್ನು ನಡೆಸುತ್ತಿದ್ದರು.

ಸಂಗೀತದ ಬರಹ ಸೇರಿದಂತೆ ಹಲವಾರು ವಿಚಾರಗಳ ಮೇಲೆ ಪಾಂಡಿತ್ಯ ಹೊಂದಿದ್ದ ಅವರ ಕೆಲವು ಪುಸ್ತಕಗಳು ಆಂಗ್ಲ ಭಾಷೆಗೆ ಅನುವಾದಗೊಂಡಿದ್ದು, ದೊಡ್ಡಬಳ್ಳಾಪುರದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರು ಎಂದರು.

ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎ.ಓ.ಆವಲಮೂರ್ತಿ, ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ, ತ.ನ.ಪ್ರಭುದೇವ್, ವಕೀಲರಾದ ಆರೂಡಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

11 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

12 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

12 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

13 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

15 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

16 hours ago