ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು.
ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ ಬಳಗದ ವತಿಯಿಂದ ಹಿರಿಯ ಪತ್ರಕರ್ತ ಸಂಪತ್ ಅಯ್ಯಂಗಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಎಂಬುದು ಇಂದು ಅಂಗಡಿಯಲ್ಲಿ ವ್ಯಾಪಾರ ಮಾಡುವ ಸರಕಾಗಿದೆ.
ಮತದಾನ ಎಂಬುದು ಹಣಕೊಟ್ಟು ಕೊಂಡುಕೊಳ್ಳುವ ವಸ್ತುವಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.
ಸಂಪತ್ ಅಯ್ಯಂಗಾರ್ ಅವರು ಐದು ಬಾರಿ ಪುರಸಭೆಯ ಸದಸ್ಯರು ಮತ್ತು ಒಂದು ಬಾರಿ ನಗರಸಭೆ ಉಪಾಧ್ಯಕ್ಷರಾಗಿದ್ದವರು, ಎಂದೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿದವರಲ್ಲ, ಜನಪರವಾಗಿದ್ದ ಅವರು ನೂರಾರು ಶವಗಳ ಸಂಸ್ಕಾರ ಮಾಡಿದ್ದರು, ದೀನ ದಲಿತರ ಪರ ನಿರಂತರ ಕಾಳಜಿ ಇದ್ದ ಅವರು ಹಲವಾರು ದಲಿತ ಯುವಕರ ಬೌದ್ಧಿಕ ಮತ್ತು ಆರ್ಥಿಕವಾಗಿ ಬೆಳೆಸಿದ್ದರು ಎಂದರು.
ಎಂ.ಎಸ್.ಸಂಪತ್ ಅಯ್ಯಂಗಾರ್ ಇನ್ನಿಲ್ಲ ಎಂದಾಗ ನಮ್ಮೊಳಗಿನ ಚೈತನ್ಯ, ಬೆಳಕು ಉತ್ಸಾಹ ಕುಂದಿತು ಎಂದು ಹೇಳುವವರಿಗೆ ಲೆಕ್ಕವಿಲ್ಲ. ಜನರಿಗೆ ಗುರು, ಗೆಳೆಯ, ಮಾರ್ಗದರ್ಶಿಯಂತಿದ್ದ ಅವರು ಒಡನಾಡಿಗಳ ಪಾಲಿಗೆ ಅಕ್ಷಯ ನಿಧಿಯಂತಿದ್ದರು, ಸಮಾಜ ಕಾಯಕ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ, ಅನುವಾದ, ಬೋಧನೆಯನ್ನು ಅವರು ಶ್ರದ್ಧೆ ಇರುವವರಿಗೆಲ್ಲಾ ಧಾರೆ ಎರೆದವರು ಎಂದರು.
ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್ ಅವರು ಮಾತನಾಡಿ ಸಂಪತ್ ಅಯ್ಯಂಗಾರ್ ಅವರು ಆತ್ಮವಿಶ್ವಾಸದ ಪ್ರತೀಕದಂತಿದ್ದರು, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಒಂದು ವರ್ಷಗಳ ಕಾಲ ಯಾವುದೇ ಸಂಭಾವನೆ ಪಡೆಯದೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.
ಬಹುಮುಖ ಪ್ರತಿಭೆಯ ಸಂಪತ್ ಅಯ್ಯಂಗಾರ್ ಅವರು ಸಂಗೀತ ಪ್ರೇಮಿಯಾಗಿದ್ದರು, ದೊಡ್ಡಬಳ್ಳಾಪುರದಲ್ಲಿ ಸಂಗೀತ ಅಭಿಮಾನಿಗಳ ಒಗ್ಗೂಡಿಸಿ ಸುಸ್ವರ ಎಂಬ ತಂಡವನ್ನು ಕಟ್ಟಿ ರಾಷ್ಟ್ರೀಯ ಮಟ್ಟದ ಸಂಗೀತ ವಿದೂಷಿಗಳನ್ನು ಕರೆಸಿ ಸಂಗೀತ ಕಚೇರಿಗಳನ್ನು ನಡೆಸುತ್ತಿದ್ದರು.
ಸಂಗೀತದ ಬರಹ ಸೇರಿದಂತೆ ಹಲವಾರು ವಿಚಾರಗಳ ಮೇಲೆ ಪಾಂಡಿತ್ಯ ಹೊಂದಿದ್ದ ಅವರ ಕೆಲವು ಪುಸ್ತಕಗಳು ಆಂಗ್ಲ ಭಾಷೆಗೆ ಅನುವಾದಗೊಂಡಿದ್ದು, ದೊಡ್ಡಬಳ್ಳಾಪುರದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರು ಎಂದರು.
ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎ.ಓ.ಆವಲಮೂರ್ತಿ, ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ, ತ.ನ.ಪ್ರಭುದೇವ್, ವಕೀಲರಾದ ಆರೂಡಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…