‘ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ’-ಕೆ.ವೆಂಕಟೇಶ್

ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ ಬಳಗದ ವತಿಯಿಂದ ಹಿರಿಯ ಪತ್ರಕರ್ತ ಸಂಪತ್ ಅಯ್ಯಂಗಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಎಂಬುದು ಇಂದು ಅಂಗಡಿಯಲ್ಲಿ ವ್ಯಾಪಾರ ಮಾಡುವ ಸರಕಾಗಿದೆ.

ಮತದಾನ ಎಂಬುದು ಹಣಕೊಟ್ಟು ಕೊಂಡುಕೊಳ್ಳುವ ವಸ್ತುವಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಸಂಪತ್ ಅಯ್ಯಂಗಾರ್ ಅವರು ಐದು ಬಾರಿ ಪುರಸಭೆಯ ಸದಸ್ಯರು ಮತ್ತು ಒಂದು ಬಾರಿ ನಗರಸಭೆ ಉಪಾಧ್ಯಕ್ಷರಾಗಿದ್ದವರು, ಎಂದೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿದವರಲ್ಲ, ಜನಪರವಾಗಿದ್ದ ಅವರು ನೂರಾರು ಶವಗಳ ಸಂಸ್ಕಾರ ಮಾಡಿದ್ದರು, ದೀನ ದಲಿತರ ಪರ ನಿರಂತರ ಕಾಳಜಿ ಇದ್ದ ಅವರು ಹಲವಾರು ದಲಿತ ಯುವಕರ ಬೌದ್ಧಿಕ ಮತ್ತು ಆರ್ಥಿಕವಾಗಿ ಬೆಳೆಸಿದ್ದರು ಎಂದರು.

ಎಂ.ಎಸ್.ಸಂಪತ್ ಅಯ್ಯಂಗಾರ್ ಇನ್ನಿಲ್ಲ ಎಂದಾಗ ನಮ್ಮೊಳಗಿನ ಚೈತನ್ಯ, ಬೆಳಕು ಉತ್ಸಾಹ ಕುಂದಿತು ಎಂದು ಹೇಳುವವರಿಗೆ ಲೆಕ್ಕವಿಲ್ಲ. ಜನರಿಗೆ ಗುರು, ಗೆಳೆಯ, ಮಾರ್ಗದರ್ಶಿಯಂತಿದ್ದ ಅವರು ಒಡನಾಡಿಗಳ ಪಾಲಿಗೆ ಅಕ್ಷಯ ನಿಧಿಯಂತಿದ್ದರು, ಸಮಾಜ ಕಾಯಕ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ, ಅನುವಾದ, ಬೋಧನೆಯನ್ನು ಅವರು ಶ್ರದ್ಧೆ ಇರುವವರಿಗೆಲ್ಲಾ ಧಾರೆ ಎರೆದವರು ಎಂದರು.

ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್ ಅವರು ಮಾತನಾಡಿ ಸಂಪತ್ ಅಯ್ಯಂಗಾರ್ ಅವರು ಆತ್ಮವಿಶ್ವಾಸದ ಪ್ರತೀಕದಂತಿದ್ದರು, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಒಂದು ವರ್ಷಗಳ ಕಾಲ ಯಾವುದೇ ಸಂಭಾವನೆ ಪಡೆಯದೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.

ಬಹುಮುಖ ಪ್ರತಿಭೆಯ ಸಂಪತ್ ಅಯ್ಯಂಗಾರ್ ಅವರು ಸಂಗೀತ ಪ್ರೇಮಿಯಾಗಿದ್ದರು, ದೊಡ್ಡಬಳ್ಳಾಪುರದಲ್ಲಿ ಸಂಗೀತ ಅಭಿಮಾನಿಗಳ ಒಗ್ಗೂಡಿಸಿ ಸುಸ್ವರ ಎಂಬ ತಂಡವನ್ನು ಕಟ್ಟಿ ರಾಷ್ಟ್ರೀಯ ಮಟ್ಟದ ಸಂಗೀತ ವಿದೂಷಿಗಳನ್ನು ಕರೆಸಿ ಸಂಗೀತ ಕಚೇರಿಗಳನ್ನು ನಡೆಸುತ್ತಿದ್ದರು.

ಸಂಗೀತದ ಬರಹ ಸೇರಿದಂತೆ ಹಲವಾರು ವಿಚಾರಗಳ ಮೇಲೆ ಪಾಂಡಿತ್ಯ ಹೊಂದಿದ್ದ ಅವರ ಕೆಲವು ಪುಸ್ತಕಗಳು ಆಂಗ್ಲ ಭಾಷೆಗೆ ಅನುವಾದಗೊಂಡಿದ್ದು, ದೊಡ್ಡಬಳ್ಳಾಪುರದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರು ಎಂದರು.

ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎ.ಓ.ಆವಲಮೂರ್ತಿ, ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ, ತ.ನ.ಪ್ರಭುದೇವ್, ವಕೀಲರಾದ ಆರೂಡಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago